ಬ್ರೇಕಿಂಗ್ ನ್ಯೂಸ್
10-03-23 06:50 pm Mangalore Correspondent ಕರಾವಳಿ
ಉಳ್ಳಾಲ, ಮಾ.10 : ಹೆದ್ದಾರಿ ಬದಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದು ಮರ, ಗಿಡಗಂಟಿಗಳು ಹೊತ್ತಿ ಉರಿದಿದ್ದು ವಸತಿ ಪ್ರದೇಶಕ್ಕೆ ಬೆಂಕಿ ವ್ಯಾಪಿಸುತ್ತಿರುವುದನ್ನ ಕಂಡ ಹೆದ್ದಾರಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸ್ ಟ್ಯಾಂಕರ್ ನೀರು ತರಿಸಿ ಬೆಂಕಿಯನ್ನ ನಂದಿಸಿದ ಘಟನೆ ಕೋಟೆಕಾರು, ಬೀರಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಟೆಕಾರಿನ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಘಟನೆ ನಡೆದಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸ್ಥಳಕ್ಕೆ ಬಂದ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ ಫಾರ್ಮರ್ ನಿಂದ ಅವಘಡ ನಡೆದಿಲ್ಲ , ಯಾರೋ ಸಿಗರೇಟ್ ಎಸೆದೋ ಅಥವಾ ಬಿಸಿಲಿನ ಝಲಕ್ಕೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.




ಬೆಂಕಿಯ ಕೆನ್ನಾಲಿಗೆ ವಿಶಾಲ ಪ್ರದೇಶದ ಮರ, ಗಿಡ ಗಂಟೆಗಳನ್ನ ಸುಟ್ಟು ಸಮೀಪದಲ್ಲಿದ್ದ ಒಂಟಿ ಮನೆ ವರೆಗೂ ವ್ಯಾಪಿಸತೊಡಗಿತ್ತು. ಈ ವೇಳೆ ಹೆದ್ದಾರಿ ಗಸ್ತು ವಾಹನದಲ್ಲಿದ್ದ ಸಂಚಾರಿ ಠಾಣಾ ಎಎಸ್ಸೈ ಸಂತೋಷ್ ಅವರು ಅಗ್ನಿಶಾಮಕ ದಳಕ್ಕೆ ಎರಡು, ಮೂರು ಬಾರಿ ಫೋನಾಯಿಸಿದರೂ ಸಕರಾತ್ಮಕ ಸ್ಪಂದನೆ ದೊರಕಿಲ್ಲ. ಕೂಡಲೇ ಸ್ಥಳೀಯರಾದ ಗಣೇಶ್ ಭಟ್ ಎಂಬವರು ದೊಡ್ಡ ನೀರಿನ ಟ್ಯಾಂಕರನ್ನು ಒದಗಿಸಿದ್ದಾರೆ. ಟ್ರಾಫಿಕ್ ಕಾನ್ಸ್ಟೇಬಲ್ ನಾಗಪ್ಪ ಗಡದ ಅವರು ಭಾರದ ಫೈಪನ್ನ ಎತ್ತಿ ನೀರು ಹಾಯಿಸಿ ಬೆಂಕಿಯನ್ನ ನಂದಿಸಿದ್ದಾರೆ. ನಾಗಪ್ಪ ಅವರಿಗೆ ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕಾರ ನೀಡಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ತುರ್ತು ಸೇವೆ ಲಭಿಸದಿದ್ದರೂ ಟ್ರಾಫಿಕ್ ಪೊಲೀಸರೇ ಬೆಂಕಿ ನಂದಿಸಿದ್ದನ್ನ ಸ್ಥಳೀಯ ಕೌನ್ಸಿಲರ್ ರಾಘವ ಗಟ್ಟಿ ಸೇರಿದಂತೆ ನೆರೆದಿದ್ದ ಜನರು ಪ್ರಶಂಸಿಸಿದ್ದಾರೆ.
Mangalore Sudden fire from the transcender suspected, plants tree on fire at Kotekar.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm