ಬ್ರೇಕಿಂಗ್ ನ್ಯೂಸ್
10-03-23 06:50 pm Mangalore Correspondent ಕರಾವಳಿ
ಉಳ್ಳಾಲ, ಮಾ.10 : ಹೆದ್ದಾರಿ ಬದಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದು ಮರ, ಗಿಡಗಂಟಿಗಳು ಹೊತ್ತಿ ಉರಿದಿದ್ದು ವಸತಿ ಪ್ರದೇಶಕ್ಕೆ ಬೆಂಕಿ ವ್ಯಾಪಿಸುತ್ತಿರುವುದನ್ನ ಕಂಡ ಹೆದ್ದಾರಿ ಗಸ್ತಿನಲ್ಲಿದ್ದ ಟ್ರಾಫಿಕ್ ಪೊಲೀಸ್ ಟ್ಯಾಂಕರ್ ನೀರು ತರಿಸಿ ಬೆಂಕಿಯನ್ನ ನಂದಿಸಿದ ಘಟನೆ ಕೋಟೆಕಾರು, ಬೀರಿ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಕೋಟೆಕಾರಿನ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿ ಘಟನೆ ನಡೆದಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸ್ಥಳಕ್ಕೆ ಬಂದ ಮೆಸ್ಕಾಂ ಸಿಬ್ಬಂದಿಗಳು ಟ್ರಾನ್ಸ್ ಫಾರ್ಮರ್ ನಿಂದ ಅವಘಡ ನಡೆದಿಲ್ಲ , ಯಾರೋ ಸಿಗರೇಟ್ ಎಸೆದೋ ಅಥವಾ ಬಿಸಿಲಿನ ಝಲಕ್ಕೆ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.




ಬೆಂಕಿಯ ಕೆನ್ನಾಲಿಗೆ ವಿಶಾಲ ಪ್ರದೇಶದ ಮರ, ಗಿಡ ಗಂಟೆಗಳನ್ನ ಸುಟ್ಟು ಸಮೀಪದಲ್ಲಿದ್ದ ಒಂಟಿ ಮನೆ ವರೆಗೂ ವ್ಯಾಪಿಸತೊಡಗಿತ್ತು. ಈ ವೇಳೆ ಹೆದ್ದಾರಿ ಗಸ್ತು ವಾಹನದಲ್ಲಿದ್ದ ಸಂಚಾರಿ ಠಾಣಾ ಎಎಸ್ಸೈ ಸಂತೋಷ್ ಅವರು ಅಗ್ನಿಶಾಮಕ ದಳಕ್ಕೆ ಎರಡು, ಮೂರು ಬಾರಿ ಫೋನಾಯಿಸಿದರೂ ಸಕರಾತ್ಮಕ ಸ್ಪಂದನೆ ದೊರಕಿಲ್ಲ. ಕೂಡಲೇ ಸ್ಥಳೀಯರಾದ ಗಣೇಶ್ ಭಟ್ ಎಂಬವರು ದೊಡ್ಡ ನೀರಿನ ಟ್ಯಾಂಕರನ್ನು ಒದಗಿಸಿದ್ದಾರೆ. ಟ್ರಾಫಿಕ್ ಕಾನ್ಸ್ಟೇಬಲ್ ನಾಗಪ್ಪ ಗಡದ ಅವರು ಭಾರದ ಫೈಪನ್ನ ಎತ್ತಿ ನೀರು ಹಾಯಿಸಿ ಬೆಂಕಿಯನ್ನ ನಂದಿಸಿದ್ದಾರೆ. ನಾಗಪ್ಪ ಅವರಿಗೆ ಮೆಸ್ಕಾಂ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕಾರ ನೀಡಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ತುರ್ತು ಸೇವೆ ಲಭಿಸದಿದ್ದರೂ ಟ್ರಾಫಿಕ್ ಪೊಲೀಸರೇ ಬೆಂಕಿ ನಂದಿಸಿದ್ದನ್ನ ಸ್ಥಳೀಯ ಕೌನ್ಸಿಲರ್ ರಾಘವ ಗಟ್ಟಿ ಸೇರಿದಂತೆ ನೆರೆದಿದ್ದ ಜನರು ಪ್ರಶಂಸಿಸಿದ್ದಾರೆ.
Mangalore Sudden fire from the transcender suspected, plants tree on fire at Kotekar.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm