ಬ್ರೇಕಿಂಗ್ ನ್ಯೂಸ್
11-03-23 03:16 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಕಸಾಯಿಖಾನೆಗೆ ಎಳೆದು ತಂದಿದ್ದ ಎಮ್ಮೆಯೊಂದು ಯುವಕನನ್ನೇ ತಿವಿದು ಕೊಂದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಸಾದಿಕ್ (22) ಮೃತ ಯುವಕ. ಆತನೇ ತನ್ನ ವಾಹನದಲ್ಲಿ ಎಮ್ಮೆಯನ್ನು ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತಂದಿದ್ದು ಅಲ್ಲಿ ತಲುಪುತ್ತಿದ್ದಂತೆಯೇ ಎಮ್ಮೆ ಸಿಟ್ಟಿನಿಂದ ತಿವಿಯಲು ಮುಂದಾಗಿದೆ. ಈ ವೇಳೆ, ಅದನ್ನು ಹಿಡಿಯಲು ಮುಂದೆ ಬಂದ ಸಾದಿಕ್ನನ್ನು ಕೊಂಬಿನಿಂದ ತಿವಿದು ಹಾಕಿದೆ.
ಕೈಕಾಲು ಕಟ್ಟಿ ತಂದಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಕೊರಳಲ್ಲಿದ್ದ ಹಗ್ಗ ತುಂಡಾಗಿದೆ. ಹಗ್ಗ ಬಿಚ್ಚಿಕೊಳ್ಳುತ್ತಲೇ ಎಮ್ಮೆ ಆಕ್ರೋಶದೊಂದಿಗೆ ನುಗ್ಗಿದ್ದು ದಾಂಧಲೆ ನಡೆಸಿದೆ. ಎಮ್ಮೆಯನ್ನು ಹಿಡಿಯುವ ಪ್ರಯತ್ನದಲ್ಲಿ ಸಾದಿಕ್ಗೆ ಹೊಟ್ಟೆಗೆ ತಿವಿದಿದೆ. ತೀವ್ರ ಗಾಯಗೊಂಡ ಸಾದಿಕ್ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಎಮ್ಮೆಯನ್ನು ಹಿಡಿಯಲು ನೂರಾರು ಜನ ಪ್ರಯತ್ನಿಸಿದ್ದು 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಆಗಮಿಸಿ ಎಮ್ಮೆಯನ್ನು ಅಡ್ಡಹಾಕಿ ಹಿಡಿದಿದ್ದಾರೆ.
A 22-year-old man died after a buffalo attacked him at Mogral Puttur, Kasargod. The deceased is identified as Sadiq from Chitradurga.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm