ಬ್ರೇಕಿಂಗ್ ನ್ಯೂಸ್
12-03-23 05:36 pm Mangalore Correspondent ಕರಾವಳಿ
ಪುತ್ತೂರು, ಮಾ.12 : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತೊಂದು ವಿವಾದ ಮೈಗೆಳೆದುಕೊಂಡಿದ್ದಾರೆ. ಅಶ್ಲೀಲ ಪದ ಬಳಸಿದ್ದಕ್ಕೆ ಒಂದು ಕ್ಷಣ ಇಡೀ ಸಭೆಯೇ ಅವಕ್ಕಾಗಿತ್ತು. ಸಿದ್ದರಾಮಯ್ಯ ಕುರಿತಾಗಿ ಅಶ್ಲೀಲ ಪದ ಬಳಸಿ ತಾವೇ ತಮ್ಮ ಸಣ್ಣತನ ತೋರಿಸಿದ್ದಾರೆ.
ಪುತ್ತೂರಿನಲ್ಲಿ ಶನಿವಾರ ಸಂಜೆ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಪ್ರಧಾನ ಭಾಷಣ ಮಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ನೆರೆದಿದ್ದ ಮಹಿಳೆಯರು ಸೇರಿದಂತೆ ನೆರೆದಿದ್ದ ಕಾರ್ಯಕರ್ತರ ಎದುರು ಅಶ್ಲೀಲ ಪದ ಪ್ರಯೋಗ ಮಾಡುವ ಮೂಲಕ ವಿವಾದ ಎಬ್ಬಿಸಿದ್ದಾರೆ.

ಇಂಥ ಪದ ಪ್ರಯೋಗ ಮಾಡುವ ಮೊದಲು ಪತ್ರಕರ್ತರೇ ಇದನ್ನೆಲ್ಲ ಬರೀಬೇಡಿ ಎಂದು ವಿನಂತಿಸಿದರು..! ನಾಲಗೆ ಹರಿಯ ಬಿಟ್ಟ ಮೇಲೆ, ಪತ್ರಕರ್ತರು ಬರೆದರೂ ನನಗೇಗೂ ಬೇಜಾರಿಲ್ಲ ಬಿಡಿ ಎಂದು ಹೇಳುವ ಮೂಲಕ ಅಹಂಕಾರ ತೋರಿಸಿದರು. ಭಾಷಣದುದ್ದಕ್ಕೂ ಸಿದ್ಧರಾಮಯ್ಯ ವಿರುದ್ಧ ಹರಿಹಾಯ್ದ ಈಶ್ವರಪ್ಪ, ಏಕವಚನ ಪ್ರಯೋಗದಿಂದಲೇ ಕೆಣಕಿದರು. ಚಾಮುಂಡೇಶ್ವರಿಯಲ್ಲಿ ಸಿದ್ರಾಮಯ್ಯ ಸೋಲಿಸಿದ್ದು ಸ್ವ ಪಕ್ಷದವರೇ. ಹಿಂದೆ ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ್ ಸೋತಿದ್ದರು. ಅವರು ಗೆದ್ದರೆ ಎಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ನೀಡ್ತಾರೋ ಅನ್ನೋ ಭಯ ಸಿದ್ರಾಮಯ್ಯಗಿತ್ತು. ಅದಕ್ಕೆ ಕುರುಬ ಸಮಾಜದ ಕೆಲವರನ್ನು ಅಲ್ಲಿಗೆ ಕಳಿಸಿ ಪರಮೇಶ್ವರ್ ಗೆಲ್ಲದಂತೆ ನೋಡಿಕೊಂಡರು. ಅದೊಂದು ದಿನ ಪರಮೇಶ್ವರ್ ಸಿಕ್ಕಾಗ ಯಾಕಪ್ಪಾ ಸೋತಿ ಎಂದು ಕೇಳಿದೆ. ಪತ್ರಕರ್ತರು ದಯವಿಟ್ಟು ಇದನ್ನು ಬರೀಬೇಡಿ. ಆ ನನ್ ಮಗ ಸೋಲಿಸಿದ ಎಂದರು.
ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿ ಸಿದ್ರಾಮಯ್ಯ ಸೋತ ಬಳಿಕ ಅದೊಂದು ದಿನ ಎದುರು ಸಿಕ್ಕ ಸಿದ್ರಾಮಯ್ಯ ಜತೆ ಯಾಕಪ್ಪಾ ಸೋತಿ ಎಂದು ಕೇಳಿದೆ. ಆ ಸೂ... ಮಗ ಸೋಲಿಸಿದ ಎಂದು ಉತ್ತರಿಸಿದ್ದರು. ಪತ್ರಕರ್ತರು ಇದನ್ನೆಲ್ಲ ಬರೆದರೂ ನನಗೇನೂ ಬೇಜಾರಿಲ್ಲ ಎಂದರು ಈಶ್ವರಪ್ಪ. ಈಶ್ವರಪ್ಪ ಭಾಷಣದಲ್ಲಿ ಹಿಂದುತ್ವ, ರಾಷ್ಟ್ರೀಯತೆ, ಮೋದಿ ಶಬ್ದಗಳು ಬಂದಾಗಲೆಲ್ಲ ಸಭೆಯಿಂದ ಚಪ್ಪಾಳೆ ಸುರಿಮಳೆ ಕೇಳಿ ಬಂದರೆ, ಅಶ್ಲೀಲ ಪದಪ್ರಯೋಗ ಮಾಡುತ್ತಿದ್ದಂತೆ ಇದ್ದಕ್ಕಿದ್ದಂತೆ ಬಿಜೆಪಿ ಸಭೆಯಲ್ಲಿ ಮೌನ ಆವರಿಸಿತು.
Eshwarappa lashes out Siddaramaiah using Vulgar words at Puttur.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm