ಬ್ರೇಕಿಂಗ್ ನ್ಯೂಸ್
14-03-23 02:03 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಆಗಾಗ ಬೆಂಕಿ ಬೀಳುವುದರಿಂದ ಬೋಂದೆಲ್, ಪಚ್ಚನಾಡಿ, ವಾಮಂಜೂರು ನೀರುಮಾರ್ಗ ವರೆಗೂ ಜನರಿಗೆ ದೊಡ್ಡ ಸಮಸ್ಯೆ ಆಗಿದೆ. ಬೆಂಕಿ ಆರಿಸಿದರೂ ಮತ್ತೆ ಮತ್ತೆ ಉರಿಯುತ್ತಿಲ್ಲ. ಆದರೆ ಮಂಗಳೂರಿನ ಇಬ್ಬರು ಬಿಜೆಪಿ ಶಾಸಕರು ಎಲ್ಲಿದ್ದಾರೆ, ಇದುವರೆಗೆ ಯಾಕೆ ಘಟನಾ ಸ್ಥಳಕ್ಕೆ ಬಂದಿಲ್ಲ. ಜನ 24 ಗಂಟೆ ಹೊಗೆ ನುಂಗಿಕೊಂಡು ಸಾಯಬೇಕಾ ಎಂದು ಮಾಜಿ ಶಾಸಕ ಮೊಯ್ದೀನ್ ಬಾವ ಮಂಗಳೂರಿನ ಇಬ್ಬರು ಶಾಸಕರ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ರಾಜ್ಯ, ಕೇಂದ್ರದಲ್ಲಿ ಮತ್ತು ಮಂಗಳೂರು ಪಾಲಿಕೆಯಲ್ಲೂ ನಿಮ್ಮದೇ ಅಧಿಕಾರ ಇದೆ. ಯಾಕೆ ನಿಮಗೆ ತ್ಯಾಜ್ಯಕ್ಕೆ ಬೆಂಕಿ ಬಿದ್ದಿರುವುದನ್ನು ನಿಲ್ಲಿಸಲು ಆಗುತ್ತಿಲ್ಲ. ಅಲ್ಲಿನ ಜನರಿಗೆ ಯಾಕೆ ತೊಂದರೆ ಕೊಡುತ್ತಿದ್ದೀರಿ ಎಂದು ಶಾಸಕರನ್ನು ಬಾವ ಪ್ರಶ್ನೆ ಮಾಡಿದರು.

ಜಿಲ್ಲಾಧಿಕಾರಿ, ಶಾಸಕರು, ಇತರೇ ಅಧಿಕಾರಿಗಳು ಮಾಸ್ಕ್ ಹಾಕಿ ತೆರಳುತ್ತಿದ್ದಾರೆ. ಆದರೆ 24 ಗಂಟೆ ತ್ಯಾಜ್ಯ ಹೊಗೆ ಸೇವಿಸುವ ಜನರ ಬಗ್ಗೆ ಕಾಳಜಿ ಮಾಡಿದ್ದೀರಾ. ಮಕ್ಕಳ ಮೇಲೆ ಯಾವ ರೀತಿಯ ಪರಿಣಾಮ ಆಗಬಹುದು, ಅವರ ಪಾಡು ಏನಾಗಬೇಕು ಯೋಚಿಸಿದ್ದೀರಾ. ನಾಡಿದ್ದು ಮಾ.17ರ ಶುಕ್ರವಾರ ಸಂಜೆ 4ಕ್ಕೆ ನಾವು ಸ್ಥಳೀಯ ಜನರನ್ನು ಒಟ್ಟು ಸೇರಿಸಿ ಪ್ರತಿಭಟನೆ ಮಾಡ್ತೇವೆ. ತ್ಯಾಜ್ಯ ಬೆಂಕಿಗೆ ಕೊನೆ ಇಲ್ವಾ. ಮಂಗಳೂರಿನ ಇಬ್ಬರು ಶಾಸಕರು ಕನಿಷ್ಠ ಸ್ಥಳ ವೀಕ್ಷಣೆಗೂ ಹೋಗಿಲ್ಲ. ಜನರ ಬದುಕಿನ ಮೇಲೆ ಸವಾರಿ ಮಾಡುತ್ತಿದ್ದೀರಾ.. ಜನಸಾಮಾನ್ಯರ ಜೊತೆಗೆ ನಾವು ಇದ್ದೇವೆ ಎಂದರು ಬಾವ.
ಪಚ್ಚನಾಡಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಮತ್ತೆ ಹತ್ತು ಎಕರೆ ಭೂಮಿ ಗುರುತಿಸಿದ್ದಾರೆ. ಮತ್ತೆ ಹತ್ತೆಕರೆ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿ ಮಾಡೋದು ಬೇಡ. ಅಲ್ಲಿ ಆಸುಪಾಸಿನ ದೇವಾಲಯ, ಪ್ರಾರ್ಥನಾಲಯಗಳಿಗೆ ಇದರಿಂದ ತೊಂದರೆ ಆಗಲಿದೆ. ಕಾಂಗ್ರೆಸ್ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಪಚ್ಚನಾಡಿಯಲ್ಲಿ ತ್ಯಾಜ್ಯ ಮಿಶ್ರಿತ ಮಲಿನ ನೀರು ಮರವೂರು ಡ್ಯಾಂಗೆ ಸೇರುತ್ತಿದೆ. ಅದೇ ನೀರನ್ನು ಕುಡಿಯುಲು ಕೊಡುತ್ತಿದ್ದಾರೆ. ಆ ಬಗ್ಗೆಯೂ ಹೋರಾಟ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಪ್ರಶ್ನೆ ಒಂದಕ್ಕೆ ಬಾವ ಉತ್ತರಿಸಿದರು.
Mangalore Former congrese MLA Maideen Bava Slams Mla Bharath Shetty and Vedavyas over frequent fire at Pachanady dumpyard area.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm