ಬ್ರೇಕಿಂಗ್ ನ್ಯೂಸ್
14-03-23 10:58 pm Mangalore Correspondent ಕರಾವಳಿ
ಮಂಗಳೂರು, ಮಾ.14: ಮಂಗಳೂರು ವಿಶ್ವವಿದ್ಯಾನಿಲಯದ 41ನೇ ವಾರ್ಷಿಕ ಘಟಿಕೋತ್ಸವದ ಪ್ರಯುಕ್ತ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಅಧ್ಯಕ್ಷ ಕಣಚೂರು ಮೋನು, ಕುಂದಾಪುರದ ಉದ್ಯಮಿ ರಾಮಕೃಷ್ಣ ಆಚಾರ್ ಮತ್ತು ಮಂಗಳೂರಿನ ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ. ಪುರಾಣಿಕ್ ಅವರನ್ನು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ.
ಮೂಲತಃ ಮರದ ವ್ಯಾಪಾರಿಯಾಗಿದ್ದ ಕಣಚೂರು ಮೋನು, ಮೊದಲಿಗೆ ನಾಟೆಕಲ್ ನಲ್ಲಿ ಕಣಚೂರು ವುಡ್ ಇಂಡಸ್ಟ್ರೀಸ್ ಹೊಂದಿದ್ದರು. ಆನಂತರ ಸಿರಿವಂತಿಕೆ ಗಳಿಸಿ 2002ರಲ್ಲಿ ಕಣಚೂರು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದ್ದರು. ಶಿಕ್ಷಣ ಸಂಸ್ಥೆಯೀಗ ಮೆಡಿಕಲ್ ಕಾಲೇಜು, ಆಸ್ಪತ್ರೆಯಾಗಿ ಬದಲಾಗಿದ್ದು ತಂದೆ- ಮಗ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಕಣಚೂರು ಮೋನು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿದ್ದಾರೆ. ಇವರನ್ನು 2023ರ ಸಾಲಿನ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯವರಾದ ರಾಮಕೃಷ್ಣ ಆಚಾರ್ ಬಡ ಕುಟುಂಬದಲ್ಲಿ ಜನಿಸಿ ಸಾಧನೆ ಮಾಡಿದವರು. ಕೇವಲ 25 ಸಾವಿರ ಬಂಡವಾಳದಲ್ಲಿ ಫ್ಯಾಬ್ರಿಕೇಶನ್ ವೃತ್ತಿ ಆರಂಭಿಸಿದ ಅವರು ಈಗ ಕೃಷಿ, ನೀರು ನಿರ್ವಹಣೆ ಮತ್ತು ಒಳಚರಂಡಿ ಸಂಸ್ಕರಣೆ ಕ್ಷೇತ್ರದಲ್ಲಿ ವರ್ಷಕ್ಕೆ 250 ಕೋಟಿ ವಹಿವಾಟು ನಡೆಸುತ್ತಾರೆ. ಇವರ ಎಲಿಕ್ಸಿರ್ ಬ್ರಾಂಡ್ ವಾಟರ್ ಪ್ಯೂರಿಫೈಯರ್ ದೇಶಾದ್ಯಂತ ನೀರು ವಿತರಿಸಲು ಪ್ರಮಾಣಿತ ಸಾಧನವಾಗಿ ಹೆಸರು ಮಾಡಿದೆ. ಕಾರ್ಕಳ ತಾಲೂಕಿನ ಮುನಿಯಾಲಿನಲ್ಲಿ 35 ಎಕರೆ ಪ್ರದೇಶದಲ್ಲಿ ಗೋಧಾಮ ನಡೆಸುತ್ತಿದ್ದಾರೆ.
ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ನಿವೃತ್ತರಾದ ಎಂಬಿ ಪುರಾಣಿಕ್ ಸಮಾಜದ ವಿವಿಧ ಸ್ತರಗಳಲ್ಲಿ ದುಡಿದು ಸಾಧನೆ ಮಾಡಿದ್ದಾರೆ. ಮಂಗಳೂರು, ತಲಪಾಡಿಯಲ್ಲಿ ಶಾರದಾ ವಿದ್ಯಾಸಂಸ್ಥೆಗಳು ಸೇರಿದಂತೆ ವಿವಿಧ ಕಡೆ ಹಲವು ಸಂಸ್ಥೆಗಳನ್ನು ಹುಟ್ಟುಹಾಕಿದ್ದಾರೆ. ವಿಶ್ವ ಹಿಂದು ಪರಿಷತ್ತಿನಲ್ಲಿ ತೊಡಗಿಕೊಂಡಿರುವ ಪುರಾಣಿಕ್ ಅವರನ್ನು ಈ ಬಾರಿ ಮಂಗಳೂರು ವಿವಿಯು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆ ಮಾಡಿದೆ. ಮೇಲಿನ ಮೂವರು ಕೂಡ ಸಿರಿವಂತರಾಗಿದ್ದು, ಸಮಾಜದಲ್ಲಿ ಹೆಸರು ಮಾಡಿದವರು. ಇತ್ತೀಚಿನ ವರ್ಷಗಳಲ್ಲಿ ಗೌರವ ಡಾಕ್ಟರೇಟ್ ಪದವಿಗಳನ್ನು ಕೆಲವು ವಿಶ್ವವಿದ್ಯಾನಿಲಯಗಳು ಮಾರಾಟ ಮಾಡುತ್ತವೆ ಎಂಬ ಆರೋಪ ಕೇಳಿಬಂದಿತ್ತು. ಎರಡು ದಿನಗಳ ಹಿಂದೆ ಸುದ್ದಿಗೋಷ್ಟಿ ನಡೆಸಿದ್ದ ಮಂಗಳೂರು ವಿವಿ ಕುಲಪತಿ ಎಡಪಡಿತ್ತಾಯ ಅವರನ್ನು ಈ ಬಗ್ಗೆ ಕೇಳಿದಾಗ, ಅದೆಲ್ಲ ಸುಳ್ಳು. ಆಧಾರ ರಹಿತ ಎಂದಿದ್ದರು.
The Mangalore University will confer honorary doctorate on Vishwa Hindu Parishad leader and chairman of Sharada Group of Educational Institutions M.B. Puranik, Congress leader and chairman of Kanachur Institute of Medical Sciences U.K. Monu, and entrepreneur G. Ramakrishna Achar, during the 41st convocation of Mangalore University on Wednesday.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm