ಬ್ರೇಕಿಂಗ್ ನ್ಯೂಸ್
15-03-23 12:12 pm Mangalore Correspondent ಕರಾವಳಿ
ಬಂಟ್ವಾಳ, ಮಾ.15: ಇತಿಹಾಸ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಎರಡು ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ ರಾಜ್ಯ ಸರ್ಕಾರ ಗಣಿಗಾರಿಕೆ ನಿಷೇಧಿಸಿದೆ. ಕಾರಿಂಜ ಬೆಟ್ಟವನ್ನು ಕೇವಲ ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕೆ ಕಾಯ್ದಿರಿಸಿ ಎಲ್ಲ ರೀತಿಯ ಗಣಿಗಾರಿಕೆ ಮತ್ತು ಕಲ್ಲುಪುಡಿ (ಕ್ರಷರ್) ಚಟುವಟಿಕೆಯನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಾರಿಂಜ ದೇವಸ್ಥಾನದ ಸಂರಕ್ಷಣೆಗಾಗಿ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಬೇಕೆಂದು ಕಳೆದ 2-3 ವರ್ಷಗಳಿಂದ ಹಿಂದು ಜಾಗರಣ ವೇದಿಕೆಯ ವತಿಯಿಂದ ಪ್ರತಿಭಟನೆ, ಹೋರಾಟ ನಡೆಸಲಾಗಿತ್ತು. ಇತ್ತೀಚೆಗೆ ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ಕುಮಾರ್ ಅವರನ್ನು ಕ್ಷೇತ್ರಕ್ಕೆ ಕರೆಸಿ ಗಣಿಗಾರಿಕೆ ನಿಷೇಧ ಪ್ರದೇಶವೆಂದು ಘೋಷಿಸುವಂತೆ ಸರಕಾರಕ್ಕೆ ಒತ್ತಡ ಹೇರಿದ್ದರು.
ಅದರಂತೆ, ಕ್ಷೇತ್ರದ ಸುತ್ತ ಗಣಿಗಾರಿಕೆ ನಿಷೇಧಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಸೂಚಿಸಲಾಗಿತ್ತು. ಮಂಗಳೂರು ಸಹಾಯಕ ಕಮಿಷನರ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರ ಮೂಲಕ ದೇವಸ್ಥಾನದ ಸುತ್ತಮುತ್ತ ಜಂಟಿ ಸ್ಥಳ ಪರಿಶೀಲನೆ ನಡೆಸಿದ್ದರು. ವರದಿ ಆಧರಿಸಿ ಜಿಲ್ಲಾಧಿಕಾರಿಯವರು ಕಾರಿಂಜ ದೇವಸ್ಥಾನದ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯನ್ನು ಗಣಿಗಾರಿಕೆ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಜಿಲ್ಲಾಧಿಕಾರಿ ವರದಿ ಕೊಟ್ಟು ಆರು ತಿಂಗಳು ಕಳೆದರೂ, ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿತ್ತು. ಇದೀಗ ಚುನಾವಣೆ ಹೊಸ್ತಿಲಲ್ಲಿ ತರಾತುರಿಯಲ್ಲಿ ಆದೇಶ ಹೊರಡಿಸಿದೆ.
ಪ್ರಸ್ತುತ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು 1994ರ ನಿಯಮ 8(3)ರಲ್ಲಿನ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಕಾರಿಂಜೇಶ್ವರ ಬೆಟ್ಟದ ಎರಡು ಕಿಮೀ ಸುತ್ತಳತೆಯಲ್ಲಿ ಗಣಿಗಾರಿಕೆ ನಿಷೇಧಿಸಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ನೀಡಿದ್ದಾರೆ.
Responding to demands for the protection of the ancient Karinjeshwara Temple located atop Karinja hills in Bantwal taluk of Dakshina Kannada district, the State government on Tuesday banned all kinds of mining and stone-crushing activities within a 2-km radius of the Hills.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm