ಬ್ರೇಕಿಂಗ್ ನ್ಯೂಸ್
15-03-23 12:12 pm Mangalore Correspondent ಕರಾವಳಿ
ಬಂಟ್ವಾಳ, ಮಾ.15: ಇತಿಹಾಸ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಎರಡು ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ ರಾಜ್ಯ ಸರ್ಕಾರ ಗಣಿಗಾರಿಕೆ ನಿಷೇಧಿಸಿದೆ. ಕಾರಿಂಜ ಬೆಟ್ಟವನ್ನು ಕೇವಲ ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕೆ ಕಾಯ್ದಿರಿಸಿ ಎಲ್ಲ ರೀತಿಯ ಗಣಿಗಾರಿಕೆ ಮತ್ತು ಕಲ್ಲುಪುಡಿ (ಕ್ರಷರ್) ಚಟುವಟಿಕೆಯನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಾರಿಂಜ ದೇವಸ್ಥಾನದ ಸಂರಕ್ಷಣೆಗಾಗಿ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಬೇಕೆಂದು ಕಳೆದ 2-3 ವರ್ಷಗಳಿಂದ ಹಿಂದು ಜಾಗರಣ ವೇದಿಕೆಯ ವತಿಯಿಂದ ಪ್ರತಿಭಟನೆ, ಹೋರಾಟ ನಡೆಸಲಾಗಿತ್ತು. ಇತ್ತೀಚೆಗೆ ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ಕುಮಾರ್ ಅವರನ್ನು ಕ್ಷೇತ್ರಕ್ಕೆ ಕರೆಸಿ ಗಣಿಗಾರಿಕೆ ನಿಷೇಧ ಪ್ರದೇಶವೆಂದು ಘೋಷಿಸುವಂತೆ ಸರಕಾರಕ್ಕೆ ಒತ್ತಡ ಹೇರಿದ್ದರು.
ಅದರಂತೆ, ಕ್ಷೇತ್ರದ ಸುತ್ತ ಗಣಿಗಾರಿಕೆ ನಿಷೇಧಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಸೂಚಿಸಲಾಗಿತ್ತು. ಮಂಗಳೂರು ಸಹಾಯಕ ಕಮಿಷನರ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರ ಮೂಲಕ ದೇವಸ್ಥಾನದ ಸುತ್ತಮುತ್ತ ಜಂಟಿ ಸ್ಥಳ ಪರಿಶೀಲನೆ ನಡೆಸಿದ್ದರು. ವರದಿ ಆಧರಿಸಿ ಜಿಲ್ಲಾಧಿಕಾರಿಯವರು ಕಾರಿಂಜ ದೇವಸ್ಥಾನದ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯನ್ನು ಗಣಿಗಾರಿಕೆ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಜಿಲ್ಲಾಧಿಕಾರಿ ವರದಿ ಕೊಟ್ಟು ಆರು ತಿಂಗಳು ಕಳೆದರೂ, ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿತ್ತು. ಇದೀಗ ಚುನಾವಣೆ ಹೊಸ್ತಿಲಲ್ಲಿ ತರಾತುರಿಯಲ್ಲಿ ಆದೇಶ ಹೊರಡಿಸಿದೆ.
ಪ್ರಸ್ತುತ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು 1994ರ ನಿಯಮ 8(3)ರಲ್ಲಿನ ಅಧಿಕಾರವನ್ನು ಚಲಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಕಾರಿಂಜೇಶ್ವರ ಬೆಟ್ಟದ ಎರಡು ಕಿಮೀ ಸುತ್ತಳತೆಯಲ್ಲಿ ಗಣಿಗಾರಿಕೆ ನಿಷೇಧಿಸಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ನೀಡಿದ್ದಾರೆ.
Responding to demands for the protection of the ancient Karinjeshwara Temple located atop Karinja hills in Bantwal taluk of Dakshina Kannada district, the State government on Tuesday banned all kinds of mining and stone-crushing activities within a 2-km radius of the Hills.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm