ಬ್ರೇಕಿಂಗ್ ನ್ಯೂಸ್
15-03-23 03:12 pm Mangalore Correspondent ಕರಾವಳಿ
ಮಂಗಳೂರು, ಮಾ.15 : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಎದುರಾಗಿರುವ ನಡುವಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಚುನಾವಣೆ ತಯಾರಿ ಆರಂಭಿಸಿದ್ದಾರೆ. ಮಂಗಳೂರು ಸೇರಿ ಜಿಲ್ಲೆಯ ವಿವಿಧೆಡೆ ಹಾಕಿರುವ ಅನಧಿಕೃತ ಜಾಹೀರಾತು ಫಲಕಗಳನ್ನು ಕೂಡಲೇ ತೆರವುಗೊಳಿಸಲು ಸೂಚಿಸಿದ್ದಾರೆ. ಅಲ್ಲದೆ, ಸಾರ್ವಜನಿಕರ ಸಭೆ, ಸಮಾರಂಭಗಳ ಮೇಲೆ ನಿಗಾ ಇರಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಮಂಗಳೂರು ನಗರ ಮತ್ತು ಇನ್ನಿತರ ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಹಾಕಿರುವ ಬ್ಯಾನರ್- ಬಂಟಿಂಗ್ಸ್, ಫ್ಲೆಕ್ಸ್, ಗೋಡೆ ಬರಹ ಮತ್ತು ಇತರ ಜಾಹೀರಾತುಗಳನ್ನು ತೆರವುಗೊಳಿಸಿ ಪ್ರತೀ ದಿನ ವರದಿ ಸಲ್ಲಿಸಬೇಕು ಎಂದು ಸೂಚಿಸಿರುವ ಜಿಲ್ಲಾಧಿಕಾರಿ, ನಗರ ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳು ಅಥವಾ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ರಾಜಕೀಯ ವ್ಯಕ್ತಿಗಳು ಸಾರ್ವಜನಿಕ ಔತಣಕೂಟ ಏರ್ಪಡಿಸುವಂತಿಲ್ಲ. ಒಂದು ವೇಳೆ ಉಲ್ಲಂಘಿಸಿದಲ್ಲಿ ಸ್ಥಳೀಯ ಪ್ರಾಧಿಕಾರಗಳು, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಐಪಿಸಿ ಕಲಂ 171 ರಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಯಾವುದೇ ಸಭಾ ಕಾರ್ಯಕ್ರಮಕ್ಕೆ ಅನುಮತಿ ನೀಡುವಾಗ ಸಭೆ ಮುಕ್ತಾಯವಾದ ಅನಂತರ ಬ್ಯಾನರ್ -ಬಂಟಿಂಗ್ ತೆರವುಗೊಳಿಸಲು ಸೂಚಿಸಬೇಕು. ಕಾನೂನು ಸುವ್ಯವಸ್ಥೆ, ಸಾಮಾಜಿಕ ಅಶಾಂತಿ ಹಾಗೂ ಶಬ್ದಮಾಲಿನ್ಯ ಉಂಟುಮಾಡುವ ಯಾವುದೇ ಚಟುವಟಿಕೆ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಕೊಂಡು ಜಿಲ್ಲಾಡಳಿತಕ್ಕೆ ವರದಿ ನೀಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಇದಕ್ಕೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿದಿನ ಉಸ್ತುವಾರಿ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಬೇಕು. ಈ ಕುರಿತ ವರದಿ ಪ್ರತಿದಿನ ಮತ್ತು ಒಟ್ಟಾರೆ ಮಾಹಿತಿ ಪ್ರತೀ ಶನಿವಾರ ಜಿ.ಪಂ. ಸಿಇಒ ಅವರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Mangalore Model code enforced, no permission for political hoardings banner, political hoardings removed ater DC order.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm