ಬ್ರೇಕಿಂಗ್ ನ್ಯೂಸ್
15-03-23 07:15 pm Mangalore Correspondent ಕರಾವಳಿ
ಉಳ್ಳಾಲ, ಮಾ.15 : ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಪಠ್ಯಪುಸ್ತಕಗಳನ್ನು ಆದಷ್ಟು ಬೇಗನೆ ರಾಜ್ಯಭಾಷೆ ಕನ್ನಡದಲ್ಲಿ ತರುವ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಭಾಷೆಯಲ್ಲೇ ಕಲಿತು ದೇಶದ ಅಭಿವೃದ್ಧಿಗೆ ವೇಗ ತುಂಬುವುದು ಇದರ ಹಿಂದಿನ ಉದ್ದೇಶ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಬುಧವಾರ ನಡೆದ 41ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಹಾಗೂ ತಜ್ಞರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಭಾಷಾ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ದೇಶದಲ್ಲಿ ಕರ್ನಾಟಕ ಜಾರಿ ಮಾಡಿದೆ ಎಂದರು.
ಘಟಿಕೋತ್ಸವ ಭಾಷಣ ಮಾಡಿದ ರಾಷ್ಟ್ರೀಯ ಮೌಲೀಕರಣ ಮತ್ತು ಮಾನ್ಯತಾ ಪರಿಷತ್ ನಿರ್ದೇಶಕ ಪ್ರೊ.ಎಸ್.ಸಿ.ಶರ್ಮ, ವಿಶ್ವವಿದ್ಯಾನಿಲಯ ಶಿಕ್ಷಣದ ಪರಿಕಲ್ಪನೆ ನಾವು ಅರ್ಥ ಮಾಡಿಕೊಳ್ಳಬೇಕು ಎಂಬುದು ರಾಷ್ಟೀಯ ಶಿಕ್ಷಣ ನೀತಿಯ ಆಶಯ. ಅದು ನಮ್ಮ ಬಹುಕಾರ್ಯ ಸಾಮರ್ಥ್ಯವನ್ನು ಹೆಚ್ಚಿಸಬೇಕು. ಪರಿಸರದೆಡೆಗೆ ಸ್ವಾರ್ಥ ರಹಿತ ಕಾಳಜಿ ನಮ್ಮಲ್ಲಿ ಬೆಳೆಯಬೇಕು ಎಂದರು. ಶಿಕ್ಷಣ ಕ್ಷೇತ್ರ ಮತ್ತು ಸಮಾಜ ಸೇವೆಯ ಸಾಧನೆಗಾಗಿ ಕಣಚೂರ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಸ್ಥಾಪಕ ಹಾಜಿ ಯು.ಕೆ.ಮೋನು, ಉದ್ಯಮಿ ಜಿ ರಾಮಕೃಷ್ಣ ಆಚಾರ್ ಹಾಗೂ ಪ್ರೊ.ಎಂ.ಬಿ.ಪುರಾಣಿಕ್ ಅವರು ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪದವಿ ಪಡೆದರು.
ಈ ಬಾರಿ 7 ಮಂದಿ ವಿದೇಶಿಗರು ಸೇರಿದಂತೆ 115 ಮಂದಿಗೆ ಪಿ.ಹೆಚ್.ಡಿ ಪದವಿ ಪ್ರದಾನ ಮಾಡಲಾಯಿತು. 55 ಮಂದಿಗೆ ಚಿನ್ನದ ಪದಕ, 57 ನಗದು ಬಹುಮಾನ ವಿತರಿಸಲಾಯಿತು. 199 ಮಂದಿ ರ್ಯಾಂಕ್ ವಿಜೇತರಲ್ಲಿ ಪ್ರಥಮ ರ್ಯಾಂಕ್ ಪಡೆದ 71 ಮಂದಿಗೆ ರಾಜ್ಯಪಾಲರು ರ್ಯಾಂಕ್ ಪ್ರಮಾಣ ಪತ್ರ ನೀಡಿದರು. ಶೈಕ್ಷಣಿಕ ವರ್ಷ 2021-22 ರಲ್ಲಿ ಶೇಕಡಾ 82.72 ಫಲಿತಾಂಶ ದಾಖಲಾಗಿದೆ. ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ, ವಿಶ್ವವಿದ್ಯಾನಿಲಯದ ಸಾಧನೆ- ಗುರಿಗಳನ್ನು ವಿವರಿಸಿ ಅತಿಥಿಗಳನ್ನು ಸ್ವಾಗತಿಸಿದರು.
Annual Convocation of Mangalore University, Higher education books to soon come in Kannada said Governor of Karnataka and the Chancellor of the University Thawar Chand Gehlot speaking at the 41st Annual Convocation of Mangalore University at Mangala Auditorium Mangalagangotri
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm