ಬ್ರೇಕಿಂಗ್ ನ್ಯೂಸ್
15-03-23 11:03 pm Udupi Correspondent ಕರಾವಳಿ
ಉಡುಪಿ, ಮಾ.15 : ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ತೊಡೆ ತಟ್ಟಿರುವ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮತ್ತೊಂದು ಅಕ್ರಮದ ದಾಖಲೆ ಬಿಚ್ಚಿಟ್ಟಿದ್ದಾರೆ. ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 5 ಕೋಟಿ ಮೌಲ್ಯದ 4.75 ಎಕರೆ ಜಾಗವನ್ನು ಅಕ್ರಮವಾಗಿ ಮಂಜೂರು ಮಾಡಿಸಿದ ಕುರಿತು ಆರೋಪ ಮಾಡಿದ್ದಾರೆ.
ಹೆಬ್ರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕಾರ್ಕಳದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಹಾಗೂ ಹಿಂದುತ್ವಕ್ಕೆ ಧಕ್ಕೆಯಾಗಿದೆ ಎಂದು ಮೂಲ ಬಿಜೆಪಿ ಕಾರ್ಯಕರ್ತರ ಅಪೇಕ್ಷೆಯ ಮೇರೆಗೆ ಕಾರ್ಕಳದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದೇನೆ. ಬಿಜೆಪಿ ಕಾರ್ಯಕರ್ತರು ನನಗೆ ಇಡೀ ತಾಲೂಕಿನಲ್ಲಿ ಬೆಂಬಲ ನೀಡುತ್ತಾರೆಂಬ ವಿಶ್ವಾಸ ಇದೆ. ಸುನಿಲ್ ಕುಮಾರ್ ಎಸಗಿರುವ ಭ್ರಷ್ಟಾಚಾರಗಳನ್ನು ಒಂದೊಂದೇ ತೆರೆದಿಡಲಿದ್ದೇನೆ ಎಂದು ಹೇಳಿದರು. ಅಕ್ರಮ ಸಕ್ರಮ ನಿಯಮವನ್ನು ಉಲ್ಲಂಘಿಸಿ ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಕೋಟ್ಯಧಿಪತಿ ವ್ಯಕ್ತಿಯೊಬ್ಬರಿಗೆ ಅಕ್ರಮವಾಗಿ ಜಾಗ ಮಂಜೂರು ಮಾಡಲಾಗಿದೆ. ಶಾಸಕರು ಇದಕ್ಕೆಷ್ಟು ಪರ್ಸೆಂಟೇಜ್ ಪಡೆದಿದ್ದಾರೆ ಎನ್ನೋದು ಬಹಿರಂಗ ಆಗಬೇಕೆಂದರು.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಅಧ್ಯಕ್ಷರಾಗಿದ್ದ ಸಮಿತಿಯ ಮುಂದೆ ಅಕ್ರಮ- ಸಕ್ರಮ ವಿಲೇವಾರಿ ಬಗ್ಗೆ ಜನಸಾಮಾನ್ಯರಿಂದ ಸುಮಾರು 2000 ಅರ್ಜಿಗಳು ಬಂದಿದ್ದವು. ಆದರೆ ಅವೆಲ್ಲವನ್ನೂ ತಿರಸ್ಕರಿಸಿ ಸರಕಾರಿ ಪ್ರಥಮ ದರ್ಜೆ ಗುತ್ತಿಗೆದಾರ ಅನಂತಕೃಷ್ಣ ಶೆಟ್ಟಿ ಎಂಬವರಿಗೆ ಅಕ್ರಮವಾಗಿ ಸರ್ವೆ ನಂ 841-1 ರಲ್ಲಿ 4.7 ಎಕ್ರೆ ಜಾಗವನ್ನು ಮಂಜೂರು ಮಾಡಲಾಗಿದೆ. ಇದನ್ನು ಎಷ್ಟು ಕಮೀಷನ್ ಪಡೆದು ಮಂಜೂರು ಮಾಡಿದ್ದಾರೆ ಎಂದು ಸುನಿಲ್ ಕುಮಾರ್ ಉತ್ತರಿಸಬೇಕು. ಇದು ಜನಸಾಮಾನ್ಯರಿಗೆ ಮಾಡಿದ ದ್ರೋಹ ಎಂದರು.

ಅಕ್ರಮ ಸಕ್ರಮ ಅರ್ಜಿ ಸಲ್ಲಿಸುವಾಗ ತಾನು ಪ್ರಥಮ ದರ್ಜೆ ಗುತ್ತಿಗೆದಾರನಾದರೂ ಅನಂತಕೃಷ್ಣ ಶೆಟ್ಟಿ ತಾನೊಬ್ಬ ಕೃಷಿಕ ಎಂದು ಸುಳ್ಳು ಹೇಳಿದ್ದ. ಅಲ್ಲದೆ, ಸ್ವತಃ ಒಬ್ಬ ಕೋಟ್ಯಧಿಪತಿ ಆಗಿದ್ದರೂ, ಬಡವರ ಪಾಲಾಗಬೇಕಿದ್ದ ಭೂಮಿಯನ್ನು ಅಕ್ರಮವಾಗಿ ಪಡೆದಿದ್ದಾರೆ. ಇವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಬೇಕು. ಇವರ ಕೈಯಲ್ಲಿರುವ ಭೂಮಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈಗಾಗಲೇ ಶಾಸಕ ಸುನಿಲ್ ಕುಮಾರ್ ವಿರುದ್ಧದ ಭೂಹಗರಣದ ದಾಖಲೆಯನ್ನು ಲೋಕಾಯುಕ್ತಕ್ಕೆ ಸಲ್ಲಿಸಿದ್ದೇವೆ. ಅಕ್ರಮ ಸಕ್ರಮ ಭೂಮಿ ಮಂಜೂರಾತಿ ಬಗ್ಗೆಯೂ ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ. ಕ್ರಮ ಕೈಗೊಳ್ಳಲು ಮೀನಮೇಷ ಎಣಿಸಿದರೆ ಲೋಕಯುಕ್ತ ಕಚೇರಿ ಮುಂದೆ ಧರಣಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಆಡ್ಯಾರ್, ನಾಯಕರಾದ ಹರೀಶ್ ಅಧಿಕಾರಿ, ಸುಧೀಂದ್ರ ಹೆಬ್ರಿ, ರಾಘವ್ ನಾಯಕ್ ಮುದ್ರಾಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Karkala Pramod Muthalik slams Minister Sunil kumar over percentage.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm