ಬ್ರೇಕಿಂಗ್ ನ್ಯೂಸ್
23-10-20 10:24 pm Mangalore Reporter ಕರಾವಳಿ
ಮಂಗಳೂರು. ಅಕ್ಟೋಬರ್ .23 : ಅಕ್ರಮ ಗೋಹತ್ಯೆಗೆ ನಿಯಂತ್ರಣ ಹೇರುವ ಪ್ರಯತ್ನವಾಗಿ ಮಂಗಳೂರು ಮಹಾನಗರಪಾಲಿಕೆ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಇರುವ 20 ಬೀಫ್ ಸ್ಟಾಲ್ ಗಳಲ್ಲಿ ಬೇರೆ ರಾಜ್ಯ, ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಕ್ರಮ ಕೈಗೊಳ್ಳುವಂತೆ ಪಾಲಿಕೆಯಿಂದ ಆದೇಶ ಮಾಡಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಾಲಿಕೆಯ ಪ್ರಕಟಣೆ ಹೇಳಿದೆ.

ಅನಧಿಕೃತವಾಗಿ ಮಾಂಸ ಮಾರಾಟ ಮಾಡುವುದು ಕಂಡುಬಂದಲ್ಲಿ ಪರವಾನಿಗೆ ರದ್ದು ಪಡಿಸಲಾಗುತ್ತದೆ. ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಮಾರಾಟಗಾರರು ಇನ್ನು ಮುಂದಕ್ಕೆ ಪಾಲಿಕೆಯ ಅಧೀನದಲ್ಲಿರುವ ಅಧಿಕೃತ ಕಸಾಯಿಖಾನೆಯಿಂದಲೇ ಮಾಂಸವನ್ನು ಪಡೆದು ಮಾರಾಟ ಮಾಡಬೇಕು. ಎಲ್ಲಾ ಬೀಫ್ ಸ್ಟಾಲ್ ಮಾಲಕರು ತಮ್ಮ ತಮ್ಮ ಅಂಗಡಿಗಳಲ್ಲಿ ಮಾರಾಟ ಮಾಡಲು ಮಾಂಸವನ್ನು ಕಸಾಯಿಖಾನೆಯಿಂದ ಪಡೆದಾಗ ಮಾಂಸವನ್ನು ಪಡೆದ ವಿವರದ ರಶೀದಿಯನ್ನು ಕಡ್ಡಾಯವಾಗಿ ಇರಿಸಬೇಕು.
ಕಸಾಯಿಖಾನೆಗೆ ಮಾಂಸಕ್ಕಾಗಿ ಜಾನುವಾರುಗಳನ್ನು ಕೊಂಡೊಯ್ಯುವಾಗ ಆರ್.ಟಿ.ಒ.ದಿಂದ ಅಧಿಕೃತವಾಗಿ ನೋಂದಣಿಗೊಂಡ ಸ್ಪೆಷಲ್ ಪರ್ಮಿಶನ್ ವೆಹಿಕಲ್ (ಎಸ್.ಪಿ.ವಿ)ನಲ್ಲೇ ಸಾಗಿಸುವಂತೆ ಸಂಬಂಧಿತ ಕಸಾಯಿಖಾನೆ ಮಾಲಕರು ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಮಹಾನಗರಪಾಲಿಕೆಯ ಮೇಯರ್ ದಿವಾಕರ ಪಾಂಡೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm