ಬ್ರೇಕಿಂಗ್ ನ್ಯೂಸ್
17-03-23 09:01 pm Mangalore Correspondent ಕರಾವಳಿ
ಮಂಗಳೂರು, ಮಾ.17 : ಒಳಚರಂಡಿ ಇನ್ನಿತರ ಸ್ವಚ್ಛತಾ ಕೆಲಸ ನಿರ್ವಹಿಸುವ ಕಾರ್ಮಿಕರು ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಧರಣಿ ನಿರತ ಅಳಕೆ ಪ್ರದೇಶಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಶುಕ್ರವಾರ ಭೇಟಿ ನೀಡಿ, ಕಾರ್ಮಿಕರ ಜತೆ ಸಂಧಾನ ಮಾತುಕತೆ ನಡೆಸಿದ್ದಾರೆ. ಶಾಸಕರ ಭರವಸೆ ಹಿನ್ನೆಲೆಯಲ್ಲಿ ಕೆಲಸ ಪುನರ್ ಆರಂಭಿಸುವುದಾಗಿ ಕಾರ್ಮಿಕರು ತಿಳಿಸಿದ್ದಾರೆ.
ಮಾ.13ರಿಂದ ಪೌರ ಕಾರ್ಮಿಕರು ಹೊರಗುತ್ತಿಗೆ ನೌಕರರ ನೇರ ನೇಮಕಾತಿ/ನೇರ ಪಾವತಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಧರಣಿ ಆರಂಭಿಸಲಾಗಿತ್ತು, ಮಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳ ಪೌರ ಕಾರ್ಮಿಕರು ಪ್ರತಿಭಟನೆ ನಿರತರಾಗಿದ್ದರು. ಇದರಿಂದ ಮಂಗಳೂರು ನಗರದಲ್ಲಿ ಒಳಚರಂಡಿ ಸಮಸ್ಯೆ ಬಿಗಡಾಯಿಸುವಂತಾಗಿತ್ತು. ಶುಕ್ರವಾರ ಮಧ್ಯಾಹ್ನದ ಒಳಗೆ ಶಾಸಕರು, ಅಧಿಕಾರಿಗಳು ಸ್ಥಳಕ್ಕೆ ಬಂದು ಭರವಸೆ ನೀಡದಿದ್ದರೆ ತ್ಯಾಜ್ಯವನ್ನು ಮೈಗೆ ಸುರಿದುಕೊಂಡು ಮಹಾನಗರ ಪಾಲಿಕೆಗೆ ಮೆರವಣಿಗೆ ನಡೆಸುವುದಾಗಿ ಎಚ್ಚರಿಸಿದ್ದರು.

ಹೀಗಾಗಿ ಮಧ್ಯಾಹ್ನ ಎರಡು ಗಂಟೆಯ ವೇಳೆಗೆ ಶಾಸಕ ವೇದವ್ಯಾಸ್ ಕಾಮತ್ ಪ್ರತಿಭಟನೆ ನಡೆಯುತ್ತಿದ್ದ ಕುದ್ರೋಳಿಗೆ ಅಳಕೆಗೆ ಬಂದಿದ್ದು ಕಾರ್ಮಿಕರ ಜೊತೆ ಮಾತುಕತೆ ನಡೆಸಿದ್ದಾರೆ. ಕಾರ್ಮಿಕರು ನ್ಯಾಯಯುತವಾಗಿಯೇ ಹೋರಾಟ ಮಾಡುತ್ತಿದ್ದಾರೆ. ಅವರ ಬೇಡಿಕೆ ಸರಿಯಾಗಿಯೇ ಇದೆ. ಆದರೆ ಇದರಿಂದ ಮಂಗಳೂರಿನ ಜನರು ತೊಂದರೆ ಅನುಭವಿಸುತ್ತಿದ್ದು ಇದರ ಬಗ್ಗೆ ಕಾರ್ಮಿಕರಿಗೆ ಮನವರಿಕೆ ಮಾಡಲಾಗಿದೆ. ಕಾರ್ಮಿಕರ ಬೇಡಿಕೆ ಪರಿಗಣಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಕಿಶೋರ್ ಕೊಟ್ಟಾರಿ, ಶಕೀಲಾ ಕಾವ, ಮಾಜಿ ಮೇಯರ್ ದಿವಾಕರ್, ಕಾರ್ಪೊರೇಟರ್ಗಳಾದ ಸುಧೀರ್ ಶೆಟ್ಟಿ ಕಣ್ಣೂರು, ಜಯಶ್ರೀ ಕುಡ್ವ ಮತ್ತಿತರರು ಉಪಸ್ಥಿತರಿದ್ದರು.
ಸಭೆಯ ಬಳಿಕ ಧರಣಿ ಕುಳಿತ ಕಾರ್ಮಿಕರು ಮಾತನಾಡಿ, ಶಾಸಕ ವೇದವ್ಯಾಸ್ ಕಾಮತ್ ಅವರು ನಮ್ಮ ಸಮಸ್ಯೆಗಳನ್ನು ಆಲಿಸಿ, ಪ್ರಾಮಾಣಿಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ. ಪ್ರಮುಖವಾಗಿ ಮೂರು ಆಶ್ವಾಸನೆಗಳನ್ನು ನೀಡಿದ್ದು, ಸದ್ಯಕ್ಕೆ ಒಳಚರಂಡಿ ನಿರ್ವಹಣಾ ಕಾಮಗಾರಿಯನ್ನು ಆರಂಭಿಸಲು ನಿರ್ಧರಿಸಿದ್ದೇವೆ ಎಂದರು.
MCC's 234 underground drainage outsourced workers to take part in protest in Bengaluru. After the protesters threatened to hold a demonstration in front of the MCC by pouring sewage wastewater, MLA Vedhvyas Kamath, mayor Jayanand Anchan, and corporation commissioner Chennabasappa K arrived on the scene to negotiate with employees.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm