ಬ್ರೇಕಿಂಗ್ ನ್ಯೂಸ್
20-03-23 11:14 pm Mangalore Correspondent ಕರಾವಳಿ
ಮಂಗಳೂರು, ಮಾ.21 : ರಾಜ್ಯ ಬಿಜೆಪಿ ಸರಕಾರದ ಆಯಸ್ಸು ಇನ್ನು ಇರೋದು 35 ದಿನಗಳು ಮಾತ್ರ, ಉಳಿದಿರುವ ದಿನಗಳಲ್ಲಾದರೂ ಜನರ ಪರವಾಗಿ ಕೆಲಸ ಮಾಡಿ ತನ್ನ ಮೇಲಿನ ಕಪ್ಪು ಚುಕ್ಕೆಯನ್ನು ಕ್ಲೀನ್ ಮಾಡುವ ಬದಲು ಸರಕಾರಿ ಆಡಳಿತ ಯಂತ್ರದ ಅಂಗಡಿ ಬಂದ್ ಮಾಡಿ ಚುನಾವಣೆ ಪ್ರಚಾರದಲ್ಲಿ ನಿರತವಾಗಿದೆ ಎಂದು ಶಾಸಕ ಯು.ಟಿ. ಖಾದರ್ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯು.ಟಿ.ಖಾದರ್, ಪೌರ ಕಾರ್ಮಿಕರ ಸಮಸ್ಯೆ, ನೀರಿನ ಸಮಸ್ಯೆಯಿಂದ ಜನರು ಹತಾಶರಾಗಿದ್ದಾರೆ, ಆಡಳಿತ ವಹಿಸ್ಕೊಂಡವರು ಮಾತ್ರ ನಿರ್ಲಕ್ಷ್ಯ ಧೋರಣೆಯನ್ನು ಮುಂದಿವರಿಸಿದ್ದಾರೆ, ಒಂದು ವಾರದಿಂದ ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ಕಾರ್ಮಿಕರ ಪ್ರತಿಭಟನೆಯಿಂದಾಗಿ ನಗರದಲ್ಲಿ ಸ್ವಚ್ಛತೆ ಜತೆಗೆ ಆರೋಗ್ಯದ ಸಮಸ್ಯೆ ಆತಂಕ ಎದುರಾಗಿದೆ. ಎಲ್ಲ ವಿಭಾಗದ ನೌಕರರು ಈಗ ಪ್ರತಿಭಟನೆ ನಡೆಸುವ ಹಂತಕ್ಕೆ ಬಂದಿದ್ದಾರೆ.
ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದ್ದು, ಮಂಗಳೂರು ವಿವಿಯ ಪದವಿ ತರಗತಿಗಳ ಫಲಿತಾಂಶ ಬಾರದೆ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. ಆರ್ಟಿಓ ಕಚೇರಿಗೆ ಹೋದರೆ ಅಲ್ಲಿ ಆರ್ಸಿ ಪ್ರಿಂಟ್ ಮಾಡುವ ಕಾರ್ಡ್ ಗೂ ಗತಿಯಿಲ್ಲ. ಬಿಜೆಪಿ ಸರಕಾರ ನಡೆಸುವ ಮಂದಿ ನಲ್ವತ್ತು ಪರ್ಸೆಂಟಿನ ವಿಜಯ ಸಂಕಲ್ಪ ಯಾತ್ರೆಯಲ್ಲಿ ನಿರತರಾಗಿದ್ದಾರೆ ಎಂದು ಯು.ಟಿ.ಖಾದರ್ ಹೇಳಿದರು.
ಉರಿಗೌಡ ನಂಜೇಗೌಡರ ಕುರಿತ ಪ್ರಶ್ನೆಗೆ, ಅವರು ಯಾರು ಅಂತಲೇ ಗೊತ್ತಿಲ್ಲ ಎಂದರು. ಟಿಪ್ಪು ಕುರಿತ ಪಠ್ಯದಲ್ಲಿ ಆತನನ್ನು ಬ್ರಿಟಿಷರು ಕೊಂದಿದ್ದು ಅಂತ ಇದೆ. ಅದು ಬಿಟ್ಟರೆ ಬೇರೆ ಯಾವುದೇ ಇತಿಹಾಸ ಓದಿಲ್ಲ ಎಂದರು. ಕಳ್ಳಿಗೆ ತಾರನಾಥ ಶೆಟ್ಟಿ, ಸಂತೋಷ್ ಶೆಟ್ಟಿ ಮತ್ತಿತರರಿದ್ದರು.
Bjp will be alive for another 35 days only mocks UT Khader in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm