ಬ್ರೇಕಿಂಗ್ ನ್ಯೂಸ್
22-03-23 09:02 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಹೊರ ಗುತ್ತಿಗೆ ನೌಕರರು, ಪೌರ ಕಾರ್ಮಿಕರು ತಮ್ಮ ನೇರ ನೇಮಕಾತಿ, ನೇರ ಪಾವತಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದು ಬುಧವಾರ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದಾಗಿ ನಗರ ಭಾಗದಲ್ಲಿ ತ್ಯಾಜ್ಯ ರಾಶಿ ಬೀಳುತ್ತಿದ್ದು ಮಂಗಳೂರು ಸ್ಮಾರ್ಟ್ ಸಿಟಿ ಗಬ್ಬು ನಾರುವಂತಾಗಿದೆ. ಅಪಾರ್ಟ್ಮೆಂಟ್, ಹೊಟೇಲ್ ಮುಂದೆ ರಾಶಿ ಬಿದ್ದ ತ್ಯಾಜ್ಯ ಸಂಗ್ರಹಕ್ಕೆ ಮಹಾನಗರ ಪಾಲಿಕೆಯಿಂದ ಪರ್ಯಾಯ ವ್ಯವಸ್ಥೆ ಮಾಡಿದರೂ, ರಸ್ತೆ ಬದಿಗಳಲ್ಲಿ ಕಸದ ರಾಶಿ ದಾರಿಹೋಕರ ಮೂಗಿಗೆ ವಿಚಿತ್ರ ವಾಸನೆ ಬಡಿಯತೊಡಗಿದೆ.
ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಮಂಗಳೂರಿನ ಪಾಲಿಕೆಯಲ್ಲಿ 60 ವಾರ್ಡ್ಗಳಿಗೆ ಕಸ ಸಂಗ್ರಹದ ಹೊಣೆಯನ್ನು ಆಯಾ ಭಾಗದ ಕಾರ್ಪೊರೇಟರ್ ಗಳಿಗೆ ವಹಿಸಲಾಗಿದೆ. ಹೀಗಾಗಿ ಕಾರ್ಪೊರೇಟರ್ ಉಸ್ತುವಾರಿಯಲ್ಲಿ ಕಸ ಸಂಗ್ರಹದ ವಾಹನಗಳು ಓಡಾಡಿದರೂ ಪೂರ್ತಿಯಾಗಿ ಕಸ ತೆಗೆಯಲು ಸಾಧ್ಯವಾಗುತ್ತಿಲ್ಲ. ಒಂದು ವಾರದಿಂದ ಕಸದ ರಾಶಿ ಬಿದ್ದಿರುವುದು, ಕೆಲವು ಕಡೆ ರಸ್ತೆ ಬದಿಗಳಲ್ಲಿ ಕಸವನ್ನು ಸುರಿಯುವ ಕೃತ್ಯ ಏರಿಕೆ ಕಂಡಿದೆ.

ದೊಡ್ಡ ಕಟ್ಟಡ, ಹೋಟೆಲ್, ಕೆಲವು ಅಪಾರ್ಟ್ಮೆಂಟ್ ಆಸುಪಾಸಿನಲ್ಲಿ ಹೆಚ್ಚು ತ್ಯಾಜ್ಯ ಸಂಗ್ರಹವಾಗುತ್ತಿದ್ದು ತ್ಯಾಜ್ಯ ವಿಲೇವಾರಿ ಸವಾಲಾಗಿದೆ. ಜೊತೆಗೆ, ಮನೆ ಮನೆಯ ಕಸ ಸಂಗ್ರಹವೂ ಆಗುತ್ತಿಲ್ಲ. ಕಾರ್ಮಿಕರ ಮುಷ್ಕರಕ್ಕೆ ಬೆಂಬಲವಾಗಿ ಕಾಂಗ್ರೆಸ್ ಸೇರಿದಂತೆ ಸಮಾನ ಮನಸ್ಕರಿಂದ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯ ಸರ್ಕಾರಕ್ಕೆ ಕಗ್ಗಂಟು ಮಾಡಿದೆ.
ರಾಜ್ಯದೆಲ್ಲೆಡೆಯ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ, ಹೊರಗುತ್ತಿಗೆ ಕಾರ್ಮಿಕರ ಜತೆ ಮಾತುಕತೆ ನಡೆಸಿಕೊಂಡು ಮಹತ್ವದ ನಿರ್ಧಾರಗಳಿಗೆ ಆದೇಶ ಕೊಡಿಸುವ ಭರವಸೆ ನೀಡಿದ್ದಾರೆ. ಕಸದ ವಾಹನ ಚಾಲಕರು, ಯುಜಿಡಿ ಕಾರ್ಮಿಕರು ಸೇರಿದಂತೆ ಎಲ್ಲರನ್ನು ನೇರಪಾವತಿಗೆ ತರಲು ಮಾ.24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿಅಂಗೀಕಾರ ಪಡೆಯಲಾಗುವುದು ಎಂದಿದ್ದಾರೆ.
Sanitation workers protest steps into 10th day, Mangalore city filled with garbage, residents face issues.
07-01-26 03:07 pm
HK News Desk
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
07-01-26 01:53 pm
HK News Desk
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
07-01-26 12:10 pm
Mangalore Correspondent
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm