ಬ್ರೇಕಿಂಗ್ ನ್ಯೂಸ್
22-03-23 09:02 pm Mangalore Correspondent ಕರಾವಳಿ
ಮಂಗಳೂರು, ಮಾ.22 : ಹೊರ ಗುತ್ತಿಗೆ ನೌಕರರು, ಪೌರ ಕಾರ್ಮಿಕರು ತಮ್ಮ ನೇರ ನೇಮಕಾತಿ, ನೇರ ಪಾವತಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದು ಬುಧವಾರ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದಾಗಿ ನಗರ ಭಾಗದಲ್ಲಿ ತ್ಯಾಜ್ಯ ರಾಶಿ ಬೀಳುತ್ತಿದ್ದು ಮಂಗಳೂರು ಸ್ಮಾರ್ಟ್ ಸಿಟಿ ಗಬ್ಬು ನಾರುವಂತಾಗಿದೆ. ಅಪಾರ್ಟ್ಮೆಂಟ್, ಹೊಟೇಲ್ ಮುಂದೆ ರಾಶಿ ಬಿದ್ದ ತ್ಯಾಜ್ಯ ಸಂಗ್ರಹಕ್ಕೆ ಮಹಾನಗರ ಪಾಲಿಕೆಯಿಂದ ಪರ್ಯಾಯ ವ್ಯವಸ್ಥೆ ಮಾಡಿದರೂ, ರಸ್ತೆ ಬದಿಗಳಲ್ಲಿ ಕಸದ ರಾಶಿ ದಾರಿಹೋಕರ ಮೂಗಿಗೆ ವಿಚಿತ್ರ ವಾಸನೆ ಬಡಿಯತೊಡಗಿದೆ.
ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಮಂಗಳೂರಿನ ಪಾಲಿಕೆಯಲ್ಲಿ 60 ವಾರ್ಡ್ಗಳಿಗೆ ಕಸ ಸಂಗ್ರಹದ ಹೊಣೆಯನ್ನು ಆಯಾ ಭಾಗದ ಕಾರ್ಪೊರೇಟರ್ ಗಳಿಗೆ ವಹಿಸಲಾಗಿದೆ. ಹೀಗಾಗಿ ಕಾರ್ಪೊರೇಟರ್ ಉಸ್ತುವಾರಿಯಲ್ಲಿ ಕಸ ಸಂಗ್ರಹದ ವಾಹನಗಳು ಓಡಾಡಿದರೂ ಪೂರ್ತಿಯಾಗಿ ಕಸ ತೆಗೆಯಲು ಸಾಧ್ಯವಾಗುತ್ತಿಲ್ಲ. ಒಂದು ವಾರದಿಂದ ಕಸದ ರಾಶಿ ಬಿದ್ದಿರುವುದು, ಕೆಲವು ಕಡೆ ರಸ್ತೆ ಬದಿಗಳಲ್ಲಿ ಕಸವನ್ನು ಸುರಿಯುವ ಕೃತ್ಯ ಏರಿಕೆ ಕಂಡಿದೆ.
ದೊಡ್ಡ ಕಟ್ಟಡ, ಹೋಟೆಲ್, ಕೆಲವು ಅಪಾರ್ಟ್ಮೆಂಟ್ ಆಸುಪಾಸಿನಲ್ಲಿ ಹೆಚ್ಚು ತ್ಯಾಜ್ಯ ಸಂಗ್ರಹವಾಗುತ್ತಿದ್ದು ತ್ಯಾಜ್ಯ ವಿಲೇವಾರಿ ಸವಾಲಾಗಿದೆ. ಜೊತೆಗೆ, ಮನೆ ಮನೆಯ ಕಸ ಸಂಗ್ರಹವೂ ಆಗುತ್ತಿಲ್ಲ. ಕಾರ್ಮಿಕರ ಮುಷ್ಕರಕ್ಕೆ ಬೆಂಬಲವಾಗಿ ಕಾಂಗ್ರೆಸ್ ಸೇರಿದಂತೆ ಸಮಾನ ಮನಸ್ಕರಿಂದ ಪ್ರತಿಭಟನೆ ನಡೆಯುತ್ತಿದ್ದು, ರಾಜ್ಯ ಸರ್ಕಾರಕ್ಕೆ ಕಗ್ಗಂಟು ಮಾಡಿದೆ.
ರಾಜ್ಯದೆಲ್ಲೆಡೆಯ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಕೋಟೆ, ಹೊರಗುತ್ತಿಗೆ ಕಾರ್ಮಿಕರ ಜತೆ ಮಾತುಕತೆ ನಡೆಸಿಕೊಂಡು ಮಹತ್ವದ ನಿರ್ಧಾರಗಳಿಗೆ ಆದೇಶ ಕೊಡಿಸುವ ಭರವಸೆ ನೀಡಿದ್ದಾರೆ. ಕಸದ ವಾಹನ ಚಾಲಕರು, ಯುಜಿಡಿ ಕಾರ್ಮಿಕರು ಸೇರಿದಂತೆ ಎಲ್ಲರನ್ನು ನೇರಪಾವತಿಗೆ ತರಲು ಮಾ.24ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿಅಂಗೀಕಾರ ಪಡೆಯಲಾಗುವುದು ಎಂದಿದ್ದಾರೆ.
Sanitation workers protest steps into 10th day, Mangalore city filled with garbage, residents face issues.
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm