ಬ್ರೇಕಿಂಗ್ ನ್ಯೂಸ್
25-03-23 12:20 pm Mangalore Correspondent ಕರಾವಳಿ
ಉಳ್ಳಾಲ, ಮಾ.25 : ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಯುವಕನೋರ್ವ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಆತ್ಮಹತ್ಯೆಗೈದ ದುರ್ದೈವಿ. ಅಕ್ಷಯ್ ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿವಸಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದನಂತೆ. ಮೊಬೈಲ್ ಶಾಪ್ ಮಾಲಕರು ಕರೆ ಮಾಡಿದರೂ ಅಕ್ಷಯ್ ಕರೆ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದೆ. ಇಂದು ಬೆಳಗ್ಗೆ ಅಕ್ಷಯ್ ತಾಯಿ, ಮನೆ ಹತ್ತಿರದ ಬೀಡಿ ಬ್ರಾಂಚಿಗೆ ಬೀಡಿ ಕೊಡಲು ತೆರಳಿದ್ದ ವೇಳೆ ಮನೆಯ ಹಾಲಿನ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ.
ಖಿನ್ನತೆಯಿಂದ ಅಕ್ಷಯ್ ಆತ್ಮ ಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಮೃತ ಅಕ್ಷಯ್ ತಾಯಿ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಕುಂಪಲದಲ್ಲಿ ಸರಣಿ ಮರಣಮೃದಂಗ
ವರ್ಷದ ಹಿಂದೆ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಾ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿವೆ. ಕಳೆದ ವಾರವಷ್ಟೆ ನಂತೂರಿನಲ್ಲಿ ನಡೆದ ಅಪಘಾತದಲ್ಲಿ ಚಿಕ್ಕಪ್ಪನ ಜತೆ ಸ್ಕೂಟರಲ್ಲಿದ್ದ ಕುಂಪಲ ಗುರುನಗರದ ವಿದ್ಯಾರ್ಥಿನಿ ಭೂಮಿಕ(17) ಸಾವನ್ನಪ್ಪಿದ್ದರು. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳೊಂದರಲ್ಲೇ ಕುಂಪಲ ಪ್ರದೇಶದ ರಿಕ್ಷಾ ಚಾಲಕರಾದ ಜಯಪ್ರಕಾಶ್(42), ಜಯಂತ್ ಎಸ್.ಕುಂಪಲ(48) ಮತ್ತು ಧನಂಜಯ ರಾವ್ (53) ಎಂಬ ಮೂವರು ಅಕಾಲಿಕವಾಗಿ ಸಾವನ್ನಪ್ಪಿದ್ದರು.
25 year old commits suicide at Kumpala in Mangalore. The deceased has been identified as Akshay. He was said to be working at a mobile store in city. Repeated suicides are been reported from kumpala since a month.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm