ಬ್ರೇಕಿಂಗ್ ನ್ಯೂಸ್
25-03-23 12:20 pm Mangalore Correspondent ಕರಾವಳಿ
ಉಳ್ಳಾಲ, ಮಾ.25 : ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಯುವಕನೋರ್ವ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಆತ್ಮಹತ್ಯೆಗೈದ ದುರ್ದೈವಿ. ಅಕ್ಷಯ್ ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿವಸಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದನಂತೆ. ಮೊಬೈಲ್ ಶಾಪ್ ಮಾಲಕರು ಕರೆ ಮಾಡಿದರೂ ಅಕ್ಷಯ್ ಕರೆ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದೆ. ಇಂದು ಬೆಳಗ್ಗೆ ಅಕ್ಷಯ್ ತಾಯಿ, ಮನೆ ಹತ್ತಿರದ ಬೀಡಿ ಬ್ರಾಂಚಿಗೆ ಬೀಡಿ ಕೊಡಲು ತೆರಳಿದ್ದ ವೇಳೆ ಮನೆಯ ಹಾಲಿನ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ.
ಖಿನ್ನತೆಯಿಂದ ಅಕ್ಷಯ್ ಆತ್ಮ ಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಮೃತ ಅಕ್ಷಯ್ ತಾಯಿ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಕುಂಪಲದಲ್ಲಿ ಸರಣಿ ಮರಣಮೃದಂಗ
ವರ್ಷದ ಹಿಂದೆ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಾ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿವೆ. ಕಳೆದ ವಾರವಷ್ಟೆ ನಂತೂರಿನಲ್ಲಿ ನಡೆದ ಅಪಘಾತದಲ್ಲಿ ಚಿಕ್ಕಪ್ಪನ ಜತೆ ಸ್ಕೂಟರಲ್ಲಿದ್ದ ಕುಂಪಲ ಗುರುನಗರದ ವಿದ್ಯಾರ್ಥಿನಿ ಭೂಮಿಕ(17) ಸಾವನ್ನಪ್ಪಿದ್ದರು. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳೊಂದರಲ್ಲೇ ಕುಂಪಲ ಪ್ರದೇಶದ ರಿಕ್ಷಾ ಚಾಲಕರಾದ ಜಯಪ್ರಕಾಶ್(42), ಜಯಂತ್ ಎಸ್.ಕುಂಪಲ(48) ಮತ್ತು ಧನಂಜಯ ರಾವ್ (53) ಎಂಬ ಮೂವರು ಅಕಾಲಿಕವಾಗಿ ಸಾವನ್ನಪ್ಪಿದ್ದರು.
25 year old commits suicide at Kumpala in Mangalore. The deceased has been identified as Akshay. He was said to be working at a mobile store in city. Repeated suicides are been reported from kumpala since a month.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm