ಬ್ರೇಕಿಂಗ್ ನ್ಯೂಸ್
25-03-23 04:13 pm Mangalore Correspondent ಕರಾವಳಿ
ಸುಳ್ಯ, ಮಾ.25 : ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಮಣ್ಣು ಕುಸಿದು ಬಿದ್ದು ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಸುಳ್ಯ ಪೇಟೆ ಹೊರಭಾಗದ ಆಲೆಟ್ಟಿ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ಕಾರ್ಮಿಕರು ಉತ್ತರ ಕರ್ನಾಟಕ ಮೂಲದವರು. ಇಬ್ಬರನ್ನು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇಗೊಡ್ಡೆಟ್ಟಿ ಸೋಮಶೇಖರ್ ರೆಡ್ಡಿ (45) ಮತ್ತು ಅವರ ಪತ್ನಿ ಶಾಂತ (35) ಎಂದು ಗುರುತಿಸಲಾಗಿದೆ. ಇನ್ನೋರ್ವ ಯುವಕ ಮೃತಪಟ್ಟಿದ್ದಾನೆ. ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಸುಳ್ಯ ಪೇಟೆ ಹೊರಭಾಗದ ಆಲೆಟ್ಟಿ ಬಳಿ ಘಟನೆ ನಡೆದಿದೆ.



ಖಾಸಗಿ ವ್ಯಕ್ತಿಯೊಬ್ಬರು ಮನೆಯ ಹಿಂಭಾಗದಲ್ಲಿ ಧರೆ ಕುಸಿಯದಂತೆ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದು ಪಿಲ್ಲರ್ ತೆಗೆಯಲು ಅಗೆದು ಕಾಮಗಾರಿ ನಡೆಸುತ್ತಿದ್ದರು. ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾಗಲೇ ಮೇಲ್ಭಾಗದ ಮಣ್ಣು ಕುಸಿದು ಬಿದ್ದಿದೆ. ಘಟನೆ ವೇಳೆ ಏಳು ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು. ನಾಲ್ವರು ಓಡಿ ಪಾರಾಗಿದ್ದರೆ, ಮೂವರು ಮಣ್ಣಿನಡಿ ಸಿಲುಕಿದ್ದಾರೆ. ಕೂಡಲೇ ಜೆಸಿಬಿ ಮೂಲಕ ಮಣ್ಣನ್ನು ಹೊರತೆಗೆದು ಒಳಗೆ ಸಿಲುಕಿದ್ದವರ ರಕ್ಷಣೆಗೆ ಯತ್ನಿಸಲಾಗಿತ್ತು. ಕಾರ್ಯಾಚರಣೆ ವೇಳೆ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸತತ ಒಂದುವರೆ ಗಂಟೆ ಕಾಲ ಕಾರ್ಯಾಚರಣೆ ನಡೆಸಲಾಗಿದ್ದು ಒಳಗೆ ಸಿಲುಕಿದ್ದ ಮೂವರು ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಸಚಿವ ಎಸ್.ಅಂಗಾರ, ತಹಶೀಲ್ದಾರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸುಳ್ಯ ಪೊಲೀಸರು, ಅಗ್ನಿಶಾಮಕ ದಳ ಸಿಬಂದಿ ಆಗಮಿಸಿದ್ದಾರೆ.
Mangalore Retaining wall collapses in Sullia, three workers killed on spot. After one hour of work by JCB the three workers who were stuck inside the mud were removed. Minster Angara visited the spot.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm