ಬ್ರೇಕಿಂಗ್ ನ್ಯೂಸ್
24-10-20 02:45 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 24: ಇತ್ತೀಚೆಗೆ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆಗೆ ಅಕ್ಕಿ ಹಾಕುವ ವಿಚಾರದಲ್ಲಿ ಟೀಕೆ, ಬೆದರಿಕೆಗೆ ಗುರಿಯಾಗಿದ್ದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಮತ್ತೆ ದೇವಸ್ಥಾನಕ್ಕೆ ಭೇಟಿಯಿತ್ತು ಪ್ರಾರ್ಥನೆ ಸಲ್ಲಿಸಿ ಬಂದಿದ್ದಾರೆ.
ಘಟನೆ ಬಗ್ಗೆ ಮುಂಬೈಯಿಂದ ಬೆದರಿಕೆ ಕರೆ ಬಂದಿದ್ದ ವಿಚಾರದಲ್ಲಿ ಮೊಯ್ದೀನ್ ಬಾವಾ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಪರ - ವಿರೋಧ ಚರ್ಚೆಗಳ ನಡುವೆಯೂ ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಮೊಕ್ತೇಸರ ನಾರಾಯಣ ಎನ್ . ಪೂಜಾರಿಯವರ ಆಹ್ವಾನದ ಮೇರೆಗೆ ಮೊಯ್ದೀನ್ ಬಾವಾ ಮತ್ತೊಮ್ಮೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.


ಬಾವಾ ಅವರನ್ನು ಶ್ರೀ ಕ್ಷೇತ್ರದ ಆಡಳಿತ ಮಂಡಳಿ ವತಿಯಿಂದ ಸ್ವತಃ ಆಡಳಿತ ಮೊಕ್ತೇಸರರೇ ಸ್ವಾಗತಿಸಿ ಬರಮಾಡಿಕೊಂಡರು. ಶ್ರೀ ಕ್ಷೇತ್ರದ ವತಿಯಿಂದ ಮುಂದಿನ ವರ್ಷ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಬಾವಾರವರಿಗೆ ಇದೇ ಸಂದರ್ಭದಲ್ಲಿ ಆಡಳಿತ ಕಮಿಟಿಯಿಂದ ಆಹ್ವಾನ ನೀಡಲಾಯಿತು.
ಇದೇ ವೇಳೆ, ಶ್ರೀ ಕ್ಷೇತ್ರ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಬಾವಾರವರು ವೈಯುಕ್ತಿಕವಾಗಿ ದೇಣಿಗೆ ನೀಡಿದರು. ಬೆದರಿಕೆ ಕರೆ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರಿಗೆ ದೇವರು ಒಳ್ಳೆಯ ಸದ್ಬುದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾಗಿ ಬಾವಾರವರು ಇದೇ ವೇಳೆ ಅಲ್ಲಿದ್ದ ಜನರಲ್ಲಿ ಹೇಳಿಕೊಂಡಿದ್ದಾರೆ.
Amid life threat former MLA Mohiuddin Bava visits temple again to perform religious activity at Shri Shethra Temple in Mangaluru.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm