ಬ್ರೇಕಿಂಗ್ ನ್ಯೂಸ್
25-03-23 10:40 pm Mangalore Correspondent ಕರಾವಳಿ
ಬಂಟ್ವಾಳ, ಮಾ.25 : ಗುಜರಾತಿನ ನ್ಯಾಯಾಲಯ ರಾಹುಲ್ ಗಾಂಧಿಯನ್ನು ಜೈಲಿಗಟ್ಟಿದ್ದರಲ್ಲಿ ಅಚ್ಚರಿ ಇಲ್ಲ. ಇಡೀ ದೇಶದಲ್ಲಿ ನ್ಯಾಯಾಂಗ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದ್ದೇ ಆದಲ್ಲಿ ಬಿಜೆಪಿಯ ಶೇ.75 ರಷ್ಟು ಸಂಸದರು ಜೈಲಲ್ಲಿರುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗಡೆ ಹೇಳಿದ್ದಾರೆ.
ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ 14 ದಿನಗಳ ಕಾಲ ನಡೆಯುತ್ತಿರುವ ಬಂಟ್ವಾಳ ತಾಲೂಕಿನ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ರಾಯಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಎಂ. ಜಿ. ಹೆಗಡೆ, ಸಿದ್ದರಾಮಯ್ಯರನ್ನು ಮುಗಿಸಿಬಿಡಿ ಎಂದವರ ಮೇಲೆ ಯಾವುದೇ ಕೇಸ್ ದಾಖಲಿಸಿಲ್ಲ, ಪ್ರಶ್ನೆ ಮಾಡಿದವರನ್ನು ಹೊಸಕಿ ಹಾಕುವ ಪ್ರವೃತ್ತಿ ಬಿಜೆಪಿಯಿಂದ ನಡೆಯುತ್ತಿದೆ ಎಂದರು.
ಭಾವನಾತ್ಮಕವಾಗಿ ಜನರನ್ನು ಹಾದಿ ತಪ್ಪಿಸುವ ಕಾರ್ಯ ಬಿಜೆಪಿ ಮಾಡುತ್ತಿತ್ತು. ಈಗ ಅದೇ ಹಿನ್ನಡೆಯಾಗುತ್ತಿದೆ. ಈಗ ಎಲ್ಲರಿಗೂ ಜ್ಞಾನೋದಯವಾಗಿದೆ. ಬಿಜೆಪಿಗೆ ಅಭಿವೃದ್ಧಿಯ ಕತೆ ಬೇಡ. ಇಡಿ, ಸಿಡಿ, ಬೀಡಿ ಸೂತ್ರದಲ್ಲಿ ಬಿಜೆಪಿ ನಡೆಯುತ್ತಿದೆ ಎಂದು ಲೇವಡಿ ಮಾಡಿದ ಅವರು ಅಭಿವೃದ್ಧಿಯೇ ರಾಜಕಾರಣದ ಚುನಾವಣೆಯ ಮಂತ್ರವಾಗಬೇಕು ಎಂದು ತಿಳಿಸಿದರು.
ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಶ್ರೀಮಂತರಿಂದ ಬಡವರಿಗೆ ಕೊಡುವುದು ಕಾಂಗ್ರೆಸ್ ಕಾರ್ಯಕ್ರಮವಾದರೆ, ಬಡವರಿಂದ ಅದಾನಿ, ಅಂಬಾನಿಯಂತಹ ಕಾರ್ಪೋರೇಟ್ ಕಂಪನಿಗಳಿಗೆ ನೀಡುವ ಕಾರ್ಯವನ್ನು ಬಿಜೆಪಿ ಮಾಡುತ್ತಿದೆ. ವಿರೋಧ ಪಕ್ಷದ ಶಾಸಕನಾಗಿದ್ದಾಗಲೂ ಅಭಿವೃದ್ಧಿ ಕಾರ್ಯ ಮಾಡಿರುವುದನ್ನು ವಿರೋಧ ಪಕ್ಷದ ನಾಯಕರು ಒಪ್ಪಿಕೊಂಡಿದ್ದಾರೆ, ಕೊಲೆ ಗಡುಕರನ್ನು ವೈಭವೀಕರಣ ಮಾಡುವವರಿಂದ ನೈತಿಕತೆಯ ಮಾತುಗಳನ್ನು ಕೇಳುವ ಅಗತ್ಯ ಇಲ್ಲ ಎಂದರು.
ಯಾತ್ರೆಯ ಸಂಚಾಲಕ ಪಿಯೂಷ್ ಎಲ್. ರೋಡ್ರಿಗಸ್, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪಕ್ಷ ಪ್ರಮುಖರಾದ ಪದ್ಮಶೇಖರ್ ಜೈನ್, ಸುದರ್ಶನ್ ಜೈನ್, ಕೆ.ಸಂಜೀವ ಪೂಜಾರಿ, ಮಾಯಿಲಪ್ಪ ಸಾಲ್ಯಾನ್ ಸಂಪತ್ ಕುಮಾರ್ ಶೆಟ್ಟಿ, ಜಯಂತಿ ಪೂಜಾರಿ, ಸದಾಶಿವ ಬಂಗೇರ, ಮಹಮ್ಮದ್ ಶರೀಫ್, ಸುರೇಶ್ ಜೋರಾ, ಐಡಾ ಸುರೇಶ್, ಸಿದ್ದಿಕ್ ಗುಡ್ಡೆಯಂಗಡಿ, ಅಬ್ದುಲ್ ರಝಾಕ್ ಕುಕ್ಕಾಜೆ, ಪದ್ಮನಾಭ ಸಾಮಂತ, ಚಿತ್ತರಂಜನ್ ಶೆಟ್ಟಿ, ಉಮೇಶ್ ಬೋಳಂತೂರು,ಚಂದ್ರಶೇಖರ ಪೂಜಾರಿ, ಪದ್ಮನಾಭ ರೈ, ವಾಸು ಪೂಜಾರಿ, ಉಮೇಶ್ ಕುಲಾಲ್, ಮನೋಹರ ನೇರಂಬೋಳು, ದೇವಪ್ಪ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.
75 percent of BJP leaders in India will be in jail if justice system was followed in case of Rahul Gandhi, MG Hedge in Mangalore holding press meet at Bantwal.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm