ಬ್ರೇಕಿಂಗ್ ನ್ಯೂಸ್
28-03-23 07:12 pm Mangalore Correspondent ಕರಾವಳಿ
ಮಂಗಳೂರು, ಮಾ.28 : ಹೋಳಿ ಆಚರಣೆಯ ‘ರಂಗ್ದ ಬರ್ಸ’ ಕಾರ್ಯಕ್ರಮವನ್ನು ನಾವು ಆರು ವರ್ಷಗಳಿಂದ ಮಾಡಿಕೊಂಡು ಬಂದಿದ್ದೇವೆ. ಪೊಲೀಸ್ ಇಲಾಖೆ ಅನುಮತಿ ಪಡೆದು ಕಾರ್ಯಕ್ರಮ ಆಯೋಜಿಸಿದ್ದೆವು. ಹಾಗಿದ್ದರೂ ಬಜರಂಗದಳ ಹೆಸರಲ್ಲಿ ಕಿಡಿಗೇಡಿ ಕೃತ್ಯ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಕಾರ್ಯಕ್ರಮದ ಆಯೋಜಕರು ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಾರ್ಯಕ್ರಮ ಆಯೋಜಕರಲ್ಲಿ ಒಬ್ಬರಾದ ಜೀವನ್, ಕಾರ್ಯಕ್ರಮವನ್ನು ಹಿಂದೂಗಳೇ ಆಯೋಜನೆ ಮಾಡಿರುವುದು. ಮರೋಳಿ ಸೂರ್ಯವುಡ್ಸ್ ಗ್ರೌಂಡ್ಸ್ನಲ್ಲಿ ‘ರಂಗ್ದ ಬರ್ಸ’ ಕಾರ್ಯಕ್ರಮವನ್ನು ಗೆಳೆಯರ ಸಹಭಾಗಿತ್ವದಲ್ಲಿ ಕಳೆದ 6 ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದೇವೆ. ಈ ಬಾರಿಯೂ ಪೊಲೀಸ್ ಇಲಾಖೆ ಅನುಮತಿ ಪಡೆದು ಕಾರ್ಯಕ್ರಮ ಆಯೋಜನೆ ಮಾಡಿದ್ದೆವು. ಇದು ವಿದ್ಯಾರ್ಥಿಗಳಿಗೆ ಮಾತ್ರ ಅಲ್ಲ ಮಕ್ಕಳಿಂದ ಹಿಡಿದು ಕುಟುಂಬ ವರ್ಗದವರೆಲ್ಲ ಪಾಲ್ಗೊಳ್ಳಲು ಅವಕಾಶ ಇತ್ತು. ಅನ್ಯಧರ್ಮೀಯರು ಇದ್ದಾರೆಂದು, ಯುವಕ- ಯುವತಿಯರು ಕುಣಿಯುತ್ತಿದ್ದಾರೆಂದು ಆರೋಪಿಸಿ ಕಾರ್ಯಕ್ರಮ ನಿಲ್ಲಿಸಿದ್ದಾರೆ.





ಆದರೆ ಕಾರ್ಯಕ್ರಮ ನಿಲ್ಲಿಸಬೇಕೆಂದರೆ ಮೊದಲೇ ನಮ್ಮನ್ನು ಸಂಪರ್ಕಿಸಬಹುದಿತ್ತು. ಅಥವಾ ಕಾನೂನು ಪ್ರಕಾರ ಪೊಲೀಸ್ ದೂರು ಕೊಟ್ಟು ನಿಲ್ಲಿಸಬಹುದಿತ್ತು. ಅದನ್ನು ಬಿಟ್ಟು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಏಕಾಏಕಿ ನುಗ್ಗಿ ಹಲ್ಲೆ ಮಾಡಿ ಕಾರ್ಯಕ್ರಮವನ್ನು ನಿಲ್ಲಿಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು. ಯಾರನ್ನೂ ಬಲವಂತವಾಗಿ ಕಾರ್ಯಕ್ರಮಕ್ಕೆ ಕರೆಯದೇ ಮೊದಲೇ ಆಹ್ವಾನ ನೀಡಲಾಗಿತ್ತು. ಈ ಬಗ್ಗೆ ಒಂದು ತಿಂಗಳಿನಿಂದ ಪ್ರಚಾರವನ್ನೂ ಮಾಡಿದ್ದೆವು. ಇದರಿಂದ ನಮಗೆ 5 ಲಕ್ಷ ರೂ. ನಷ್ಟ ಉಂಟಾಗಿದೆ. ನಷ್ಟಕ್ಕೆ ಯಾರು ಹೊಣೆ. ನಾವು ಅಕ್ರಮ ಮಾಡಿದ್ದರೆ ಪೊಲೀಸರ ಮೂಲಕ ಕ್ರಮ ಜರುಗಿಸಬಹುದಿತ್ತು ಎಂದರು.
Mangalore Rang Bajrang Dal activists attack DJ Rang De Barsa Holi Party at Maroli, organizers slams activists. The program was soley organised by Hindu community leaders. The program was soley organized with prior permission from the police commissioner. The program was stopped stating that girls and boys of other community will join the program. According to sources, the organiser Arjun had obtained permission to celebrate Holi at the ‘Surya Woods’ in Maroli. On March 26 afternoon, some students were enjoying the Holi celebrations at Surya Woods. When the party was going on, Bajrang Dal activists barged into the venue and disrupted the programme saying that an obscene dance was going on. They damaged the banners and the hoarding put up for the programme.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm