ಬ್ರೇಕಿಂಗ್ ನ್ಯೂಸ್
30-03-23 01:02 pm Mangalore Correspondent ಕರಾವಳಿ
ಉಳ್ಳಾಲ, ಮಾ.30: ಹೆಜ್ಜೇನು ದಾಳಿಗೆ ತುತ್ತಾಗಿ ಮೂವರು ಗಾಯಗೊಂಡಿದ್ದು ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ನಗರದ ಫಾ. ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ ಘಟನೆ ನರಿಂಗಾನ ಗ್ರಾಮದ ಬೋಳದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಬೋಳ ನಿವಾಸಿ ರಾಬರ್ಟ್ ಕುಟಿನ್ಹ(79), ಅವರ ಪುತ್ರ ರಾಯಲ್ ಕುಟಿನ್ಹ(39) ಹೆಜ್ಜೇನು ದಾಳಿಗೆ ತುತ್ತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ಸಂದರ್ಭ ಅಣ್ಣನ ಕೂಗು ಕೇಳಿ ಧಾವಿಸಿದ ರಾಬರ್ಟ್ ಕುಟಿನ್ಹ ಅವರ ಸಹೋದರ ಜೋಸೆಫ್ ಕುಟಿನ್ಹ ಅವರಿಗೂ ಗಾಯಗಳಾಗಿದ್ದು ಸದ್ಯ ಚೇತರಿಸಿಕೊಂಡಿದ್ದಾರೆ. ಜೋಸೆಫ್ ಕುಟಿನ್ಹ ಅವರ ಪುತ್ರ ಅಖಿಲ್ ಅವರಿಗೂ ಹೆಜ್ಜೇನು ಕಡಿದಿದೆ.
ರಾಬರ್ಟ್ ಕುಟಿನ್ಹ ಅವರು ಬೆಳಗ್ಗೆ ಒಣಗಿದ ಬಟ್ಟೆ ತೆಗೆಯಲೆಂದು ಮನೆಯ ಮಹಡಿ ಹತ್ತುತ್ತಿದ್ದಾಗ ಇದ್ದಕ್ಕಿದ್ದಂತೆ ಹೆಜ್ಜೇನು ದಾಳಿ ಮಾಡಿದ್ದು ನೋವು ತಡೆಯಲಾರದೆ ಕೂಗಿಕೊಂಡಾಗ ರಕ್ಷಣೆಗೆಂದು ಧಾವಿಸಿದ ಪುತ್ರ ರಾಯಲ್ ಮೇಲೂ ದಾಳಿ ಮಾಡಿದೆ. ಮಗನ ಸಹಾಯದಿಂದ ಮಹಡಿಯಿಂದ ಪವಾಡ ಸದೃಶ ಇಳಿದು ಪಾರಾದರೂ ಅವರಿಬ್ಬರ ಕೂಗು ಕೇಳಿದ ಜೋಸೆಫ್ ಕುಟಿನ್ಹ ಹಾಗೂ ಅಖಿಲ್ ರಕ್ಷಣೆಗೆ ಧಾವಿಸಿದಾಗ ಅವರಿಗೂ ನೊಣಗಳು ಕಡಿದಿವೆ. ರಾಬರ್ಟ್ ಕುಟಿನ್ಹ ಅವರಿಗೆ ಸುಮಾರು ನೂರೈವತ್ತು ಕಡೆ ಗಾಯಗಳಾಗಿದ್ದು ಮಹಡಿಯಿಂದ ಇಳಿದರೂ ಹೆಜ್ಜೇನು ಬೆಂಬಿಡದಾಗ ಬೇರೆ ದಾರಿ ಕಾಣದೆ ಕಟ್ಟ ಕಡೆಗೆ ಸಮೀಪದ ಬಾವಿಗೆ ಇಳಿದು ನೀರಿನಲ್ಲಿ ಮುಳುಗಿ ಸುಮಾರು ಹೊತ್ತಿನ ಬಳಿಕ ಮೇಲೆದ್ದು ಬಂದು ಜೀವ ಉಳಿಸಿಕೊಂಡಿದ್ದಾರೆ. ಪುತ್ರ ರಾಯಲ್ ಗೂ ಸುಮಾರು ಇಪ್ಪತ್ತೆರಡು ಕಡೆ ಗಾಯಗಳಾಗಿದ್ದು ಮುಖ ನೋವಿನಿಂದ ಊದಿಕೊಂಡಿದೆ. ಮನೆಯ ಸಿಟ್ ಔಟ್ ನಲ್ಲಿ ರಾಯಲ್ ಪತ್ನಿ ಹಾಗೂ ಮಗು ಕುಳಿತುಕೊಂಡಿದ್ದರೂ ಮನೆ ಮಂದಿ ಎಚ್ಚರಿಸಿದ ಕಾರಣ ಮನೆಯ ಕೊಠಡಿಯೊಳಗೆ ರಕ್ಷಣೆ ಪಡೆದಿದ್ದು ಕಿಟಕಿಗಳಿಗೆ ನೆಟ್ ಹಾಕಿದ್ದರಿಂದ ಅವರುಗಳು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
Mangalore Two hospitalised after honeybee attack in Naringana Ullal. 79 year old grandfather was said to be hiding inside the well to escape the attack.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm