ಬ್ರೇಕಿಂಗ್ ನ್ಯೂಸ್
30-03-23 01:02 pm Mangalore Correspondent ಕರಾವಳಿ
ಉಳ್ಳಾಲ, ಮಾ.30: ಹೆಜ್ಜೇನು ದಾಳಿಗೆ ತುತ್ತಾಗಿ ಮೂವರು ಗಾಯಗೊಂಡಿದ್ದು ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ನಗರದ ಫಾ. ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ ಘಟನೆ ನರಿಂಗಾನ ಗ್ರಾಮದ ಬೋಳದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಬೋಳ ನಿವಾಸಿ ರಾಬರ್ಟ್ ಕುಟಿನ್ಹ(79), ಅವರ ಪುತ್ರ ರಾಯಲ್ ಕುಟಿನ್ಹ(39) ಹೆಜ್ಜೇನು ದಾಳಿಗೆ ತುತ್ತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ಸಂದರ್ಭ ಅಣ್ಣನ ಕೂಗು ಕೇಳಿ ಧಾವಿಸಿದ ರಾಬರ್ಟ್ ಕುಟಿನ್ಹ ಅವರ ಸಹೋದರ ಜೋಸೆಫ್ ಕುಟಿನ್ಹ ಅವರಿಗೂ ಗಾಯಗಳಾಗಿದ್ದು ಸದ್ಯ ಚೇತರಿಸಿಕೊಂಡಿದ್ದಾರೆ. ಜೋಸೆಫ್ ಕುಟಿನ್ಹ ಅವರ ಪುತ್ರ ಅಖಿಲ್ ಅವರಿಗೂ ಹೆಜ್ಜೇನು ಕಡಿದಿದೆ.
ರಾಬರ್ಟ್ ಕುಟಿನ್ಹ ಅವರು ಬೆಳಗ್ಗೆ ಒಣಗಿದ ಬಟ್ಟೆ ತೆಗೆಯಲೆಂದು ಮನೆಯ ಮಹಡಿ ಹತ್ತುತ್ತಿದ್ದಾಗ ಇದ್ದಕ್ಕಿದ್ದಂತೆ ಹೆಜ್ಜೇನು ದಾಳಿ ಮಾಡಿದ್ದು ನೋವು ತಡೆಯಲಾರದೆ ಕೂಗಿಕೊಂಡಾಗ ರಕ್ಷಣೆಗೆಂದು ಧಾವಿಸಿದ ಪುತ್ರ ರಾಯಲ್ ಮೇಲೂ ದಾಳಿ ಮಾಡಿದೆ. ಮಗನ ಸಹಾಯದಿಂದ ಮಹಡಿಯಿಂದ ಪವಾಡ ಸದೃಶ ಇಳಿದು ಪಾರಾದರೂ ಅವರಿಬ್ಬರ ಕೂಗು ಕೇಳಿದ ಜೋಸೆಫ್ ಕುಟಿನ್ಹ ಹಾಗೂ ಅಖಿಲ್ ರಕ್ಷಣೆಗೆ ಧಾವಿಸಿದಾಗ ಅವರಿಗೂ ನೊಣಗಳು ಕಡಿದಿವೆ. ರಾಬರ್ಟ್ ಕುಟಿನ್ಹ ಅವರಿಗೆ ಸುಮಾರು ನೂರೈವತ್ತು ಕಡೆ ಗಾಯಗಳಾಗಿದ್ದು ಮಹಡಿಯಿಂದ ಇಳಿದರೂ ಹೆಜ್ಜೇನು ಬೆಂಬಿಡದಾಗ ಬೇರೆ ದಾರಿ ಕಾಣದೆ ಕಟ್ಟ ಕಡೆಗೆ ಸಮೀಪದ ಬಾವಿಗೆ ಇಳಿದು ನೀರಿನಲ್ಲಿ ಮುಳುಗಿ ಸುಮಾರು ಹೊತ್ತಿನ ಬಳಿಕ ಮೇಲೆದ್ದು ಬಂದು ಜೀವ ಉಳಿಸಿಕೊಂಡಿದ್ದಾರೆ. ಪುತ್ರ ರಾಯಲ್ ಗೂ ಸುಮಾರು ಇಪ್ಪತ್ತೆರಡು ಕಡೆ ಗಾಯಗಳಾಗಿದ್ದು ಮುಖ ನೋವಿನಿಂದ ಊದಿಕೊಂಡಿದೆ. ಮನೆಯ ಸಿಟ್ ಔಟ್ ನಲ್ಲಿ ರಾಯಲ್ ಪತ್ನಿ ಹಾಗೂ ಮಗು ಕುಳಿತುಕೊಂಡಿದ್ದರೂ ಮನೆ ಮಂದಿ ಎಚ್ಚರಿಸಿದ ಕಾರಣ ಮನೆಯ ಕೊಠಡಿಯೊಳಗೆ ರಕ್ಷಣೆ ಪಡೆದಿದ್ದು ಕಿಟಕಿಗಳಿಗೆ ನೆಟ್ ಹಾಕಿದ್ದರಿಂದ ಅವರುಗಳು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
Mangalore Two hospitalised after honeybee attack in Naringana Ullal. 79 year old grandfather was said to be hiding inside the well to escape the attack.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm