ಬ್ರೇಕಿಂಗ್ ನ್ಯೂಸ್
30-03-23 01:02 pm Mangalore Correspondent ಕರಾವಳಿ
ಉಳ್ಳಾಲ, ಮಾ.30: ಹೆಜ್ಜೇನು ದಾಳಿಗೆ ತುತ್ತಾಗಿ ಮೂವರು ಗಾಯಗೊಂಡಿದ್ದು ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ನಗರದ ಫಾ. ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ ಘಟನೆ ನರಿಂಗಾನ ಗ್ರಾಮದ ಬೋಳದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಬೋಳ ನಿವಾಸಿ ರಾಬರ್ಟ್ ಕುಟಿನ್ಹ(79), ಅವರ ಪುತ್ರ ರಾಯಲ್ ಕುಟಿನ್ಹ(39) ಹೆಜ್ಜೇನು ದಾಳಿಗೆ ತುತ್ತಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ಸಂದರ್ಭ ಅಣ್ಣನ ಕೂಗು ಕೇಳಿ ಧಾವಿಸಿದ ರಾಬರ್ಟ್ ಕುಟಿನ್ಹ ಅವರ ಸಹೋದರ ಜೋಸೆಫ್ ಕುಟಿನ್ಹ ಅವರಿಗೂ ಗಾಯಗಳಾಗಿದ್ದು ಸದ್ಯ ಚೇತರಿಸಿಕೊಂಡಿದ್ದಾರೆ. ಜೋಸೆಫ್ ಕುಟಿನ್ಹ ಅವರ ಪುತ್ರ ಅಖಿಲ್ ಅವರಿಗೂ ಹೆಜ್ಜೇನು ಕಡಿದಿದೆ.
ರಾಬರ್ಟ್ ಕುಟಿನ್ಹ ಅವರು ಬೆಳಗ್ಗೆ ಒಣಗಿದ ಬಟ್ಟೆ ತೆಗೆಯಲೆಂದು ಮನೆಯ ಮಹಡಿ ಹತ್ತುತ್ತಿದ್ದಾಗ ಇದ್ದಕ್ಕಿದ್ದಂತೆ ಹೆಜ್ಜೇನು ದಾಳಿ ಮಾಡಿದ್ದು ನೋವು ತಡೆಯಲಾರದೆ ಕೂಗಿಕೊಂಡಾಗ ರಕ್ಷಣೆಗೆಂದು ಧಾವಿಸಿದ ಪುತ್ರ ರಾಯಲ್ ಮೇಲೂ ದಾಳಿ ಮಾಡಿದೆ. ಮಗನ ಸಹಾಯದಿಂದ ಮಹಡಿಯಿಂದ ಪವಾಡ ಸದೃಶ ಇಳಿದು ಪಾರಾದರೂ ಅವರಿಬ್ಬರ ಕೂಗು ಕೇಳಿದ ಜೋಸೆಫ್ ಕುಟಿನ್ಹ ಹಾಗೂ ಅಖಿಲ್ ರಕ್ಷಣೆಗೆ ಧಾವಿಸಿದಾಗ ಅವರಿಗೂ ನೊಣಗಳು ಕಡಿದಿವೆ. ರಾಬರ್ಟ್ ಕುಟಿನ್ಹ ಅವರಿಗೆ ಸುಮಾರು ನೂರೈವತ್ತು ಕಡೆ ಗಾಯಗಳಾಗಿದ್ದು ಮಹಡಿಯಿಂದ ಇಳಿದರೂ ಹೆಜ್ಜೇನು ಬೆಂಬಿಡದಾಗ ಬೇರೆ ದಾರಿ ಕಾಣದೆ ಕಟ್ಟ ಕಡೆಗೆ ಸಮೀಪದ ಬಾವಿಗೆ ಇಳಿದು ನೀರಿನಲ್ಲಿ ಮುಳುಗಿ ಸುಮಾರು ಹೊತ್ತಿನ ಬಳಿಕ ಮೇಲೆದ್ದು ಬಂದು ಜೀವ ಉಳಿಸಿಕೊಂಡಿದ್ದಾರೆ. ಪುತ್ರ ರಾಯಲ್ ಗೂ ಸುಮಾರು ಇಪ್ಪತ್ತೆರಡು ಕಡೆ ಗಾಯಗಳಾಗಿದ್ದು ಮುಖ ನೋವಿನಿಂದ ಊದಿಕೊಂಡಿದೆ. ಮನೆಯ ಸಿಟ್ ಔಟ್ ನಲ್ಲಿ ರಾಯಲ್ ಪತ್ನಿ ಹಾಗೂ ಮಗು ಕುಳಿತುಕೊಂಡಿದ್ದರೂ ಮನೆ ಮಂದಿ ಎಚ್ಚರಿಸಿದ ಕಾರಣ ಮನೆಯ ಕೊಠಡಿಯೊಳಗೆ ರಕ್ಷಣೆ ಪಡೆದಿದ್ದು ಕಿಟಕಿಗಳಿಗೆ ನೆಟ್ ಹಾಕಿದ್ದರಿಂದ ಅವರುಗಳು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
Mangalore Two hospitalised after honeybee attack in Naringana Ullal. 79 year old grandfather was said to be hiding inside the well to escape the attack.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm