ಬ್ರೇಕಿಂಗ್ ನ್ಯೂಸ್
30-03-23 09:35 pm Mangalore Correspondent ಕರಾವಳಿ
ಮಂಗಳೂರು, ಮಾ.30: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಾದ್ಯಂತ ಸರಕಾರಿ ಕಚೇರಿಗಳಲ್ಲಿ ರಾಜಕೀಯ ವ್ಯಕ್ತಿಗಳ ಫೋಟೋಗಳನ್ನು ಬಳಸುವಂತಿಲ್ಲ. ನೀತಿಸಂಹಿತೆ ಪ್ರಕಾರ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಬೇಕು. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಸುದ್ದಿಗೋಷ್ಟಿ ಕರೆದು ಮಾಧ್ಯಮಕ್ಕೂ ಮಾಹಿತಿ ನೀಡಿದರಾದರೂ, ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಹೊರಭಾಗದಲ್ಲಿ ಹಾಕಿದ್ದ ರಾಜಕೀಯ ವ್ಯಕ್ತಿಗಳ ಫೋಟೊಗಳನ್ನೇ ತೆರವುಗೊಳಿಸಿಲ್ಲ.
ಸುದ್ದಿಗೋಷ್ಟಿಗೆ ತೆರಳಿದ್ದ ಮಾಧ್ಯಮದ ಮಂದಿ ಅಲ್ಲಿನ ಗೋಡೆಗಳಲ್ಲಿ ಅಂಟಿಸಿದ್ದ ರಾಜಕೀಯ ವ್ಯಕ್ತಿಗಳ ಫೋಟೋಗಳನ್ನು ಗಮನಿಸಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಇನ್ನಿತರ ವ್ಯಕ್ತಿಗಳ ಫೋಟೊಗಳನ್ನು ಗೋಡೆಗೆ ಹಾಕಿರುವುದನ್ನೂ ತೆಗೆದಿರಲಿಲ್ಲ. ಜಿಲ್ಲಾಧಿಕಾರಿ ಸುದ್ದಿಗೋಷ್ಟಿಯಲ್ಲಿ ರಾಜಕೀಯ ವ್ಯಕ್ತಿಗಳ ಬ್ಯಾನರ್, ಫೋಟೋಗಳನ್ನು ಕಟ್ಟುನಿಟ್ಟಾಗಿ ತೆರವುಗೊಳಿಸಲಾಗುವುದು, ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಚುನಾವಣಾ ವೀಕ್ಷಕರು ಪ್ರತಿ ತಾಲೂಕಿನಲ್ಲಿ ಈ ಬಗ್ಗೆ ನಿಗಾ ವಹಿಸುತ್ತಾರೆ ಎಂದು ಹೇಳಿದರು. ಆದರೆ ತಮ್ಮ ಕಚೇರಿಯಲ್ಲೇ ರಾಜಕೀಯ ವ್ಯಕ್ತಿಗಳ ಫೋಟೊ ತೆರವುಗೊಳಿಸದೆ ಜಿಲ್ಲಾಧಿಕಾರಿ ಎಟವಟ್ಟು ಮಾಡಿಕೊಂಡಿದ್ದರು.
ಕೋಲ, ನೇಮ, ಯಕ್ಷಗಾನಕ್ಕೆ ಅಡ್ಡಿಯಿಲ್ಲ
ನೀತಿಸಂಹಿತೆ ಇದ್ದರೂ, ಯಾವುದೇ ಧಾರ್ಮಿಕ ಆಚರಣೆಗಳಿಗೆ ತೊಂದರೆ ಇಲ್ಲ. ಅಲ್ಲದೆ, ಕರಾವಳಿಯ ಸಾಂಪ್ರದಾಯಿಕ ಕಲೆ ಯಕ್ಷಗಾನ ಪ್ರದರ್ಶನಕ್ಕೂ ತೊಂದರೆ ಇಲ್ಲ. ಕೋಲ, ನೇಮದಂತಹ ದೈವಾರಾಧನೆಗೂ ಅಡ್ಡಿ ಇರುವುದಿಲ್ಲ. ಯಾವುದೇ ಧರ್ಮದ ಧಾರ್ಮಿಕ ಆಚರಣೆಗಳಿಗೆ ನೀತಿಸಂಹಿತೆಯಿಂದ ಅಡ್ಡಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಯಾವುದೇ ಕಾರ್ಯಕ್ರಮದ ಬಗ್ಗೆ ಬ್ಯಾನರ್, ಬಂಟಿಂಗ್ಸ್ ಹಾಕುವುದಿದ್ದರೆ ಸ್ಥಳೀಯ ಚುನಾವಣಾಧಿಕಾರಿ ಪರವಾನಗಿ ಪಡೆಯಬೇಕು. ಅನುಮತಿ ಪಡೆಯದೆ ಬಂಟಿಂಗ್ಸ್ ಹಾಕುವಂತಿಲ್ಲ. ರಾಜಕೀಯ ಕಾರ್ಯಕ್ರಮದ ಬಗ್ಗೆಯೂ ಪೂರ್ವಾನುಮತಿ ಪಡೆದು ಬಂಟಿಂಗ್ಸ್ ಹಾಕಬಹುದು ಎಂದರು.
Mangalore Dc office breaks conduct of conduct during elections, BJP leaders photo frame remains at office.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm