ಬ್ರೇಕಿಂಗ್ ನ್ಯೂಸ್
30-03-23 09:35 pm Mangalore Correspondent ಕರಾವಳಿ
ಮಂಗಳೂರು, ಮಾ.30: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಾದ್ಯಂತ ಸರಕಾರಿ ಕಚೇರಿಗಳಲ್ಲಿ ರಾಜಕೀಯ ವ್ಯಕ್ತಿಗಳ ಫೋಟೋಗಳನ್ನು ಬಳಸುವಂತಿಲ್ಲ. ನೀತಿಸಂಹಿತೆ ಪ್ರಕಾರ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಬೇಕು. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಸುದ್ದಿಗೋಷ್ಟಿ ಕರೆದು ಮಾಧ್ಯಮಕ್ಕೂ ಮಾಹಿತಿ ನೀಡಿದರಾದರೂ, ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಹೊರಭಾಗದಲ್ಲಿ ಹಾಕಿದ್ದ ರಾಜಕೀಯ ವ್ಯಕ್ತಿಗಳ ಫೋಟೊಗಳನ್ನೇ ತೆರವುಗೊಳಿಸಿಲ್ಲ.
ಸುದ್ದಿಗೋಷ್ಟಿಗೆ ತೆರಳಿದ್ದ ಮಾಧ್ಯಮದ ಮಂದಿ ಅಲ್ಲಿನ ಗೋಡೆಗಳಲ್ಲಿ ಅಂಟಿಸಿದ್ದ ರಾಜಕೀಯ ವ್ಯಕ್ತಿಗಳ ಫೋಟೋಗಳನ್ನು ಗಮನಿಸಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಇನ್ನಿತರ ವ್ಯಕ್ತಿಗಳ ಫೋಟೊಗಳನ್ನು ಗೋಡೆಗೆ ಹಾಕಿರುವುದನ್ನೂ ತೆಗೆದಿರಲಿಲ್ಲ. ಜಿಲ್ಲಾಧಿಕಾರಿ ಸುದ್ದಿಗೋಷ್ಟಿಯಲ್ಲಿ ರಾಜಕೀಯ ವ್ಯಕ್ತಿಗಳ ಬ್ಯಾನರ್, ಫೋಟೋಗಳನ್ನು ಕಟ್ಟುನಿಟ್ಟಾಗಿ ತೆರವುಗೊಳಿಸಲಾಗುವುದು, ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಚುನಾವಣಾ ವೀಕ್ಷಕರು ಪ್ರತಿ ತಾಲೂಕಿನಲ್ಲಿ ಈ ಬಗ್ಗೆ ನಿಗಾ ವಹಿಸುತ್ತಾರೆ ಎಂದು ಹೇಳಿದರು. ಆದರೆ ತಮ್ಮ ಕಚೇರಿಯಲ್ಲೇ ರಾಜಕೀಯ ವ್ಯಕ್ತಿಗಳ ಫೋಟೊ ತೆರವುಗೊಳಿಸದೆ ಜಿಲ್ಲಾಧಿಕಾರಿ ಎಟವಟ್ಟು ಮಾಡಿಕೊಂಡಿದ್ದರು.
ಕೋಲ, ನೇಮ, ಯಕ್ಷಗಾನಕ್ಕೆ ಅಡ್ಡಿಯಿಲ್ಲ
ನೀತಿಸಂಹಿತೆ ಇದ್ದರೂ, ಯಾವುದೇ ಧಾರ್ಮಿಕ ಆಚರಣೆಗಳಿಗೆ ತೊಂದರೆ ಇಲ್ಲ. ಅಲ್ಲದೆ, ಕರಾವಳಿಯ ಸಾಂಪ್ರದಾಯಿಕ ಕಲೆ ಯಕ್ಷಗಾನ ಪ್ರದರ್ಶನಕ್ಕೂ ತೊಂದರೆ ಇಲ್ಲ. ಕೋಲ, ನೇಮದಂತಹ ದೈವಾರಾಧನೆಗೂ ಅಡ್ಡಿ ಇರುವುದಿಲ್ಲ. ಯಾವುದೇ ಧರ್ಮದ ಧಾರ್ಮಿಕ ಆಚರಣೆಗಳಿಗೆ ನೀತಿಸಂಹಿತೆಯಿಂದ ಅಡ್ಡಿ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ. ಯಾವುದೇ ಕಾರ್ಯಕ್ರಮದ ಬಗ್ಗೆ ಬ್ಯಾನರ್, ಬಂಟಿಂಗ್ಸ್ ಹಾಕುವುದಿದ್ದರೆ ಸ್ಥಳೀಯ ಚುನಾವಣಾಧಿಕಾರಿ ಪರವಾನಗಿ ಪಡೆಯಬೇಕು. ಅನುಮತಿ ಪಡೆಯದೆ ಬಂಟಿಂಗ್ಸ್ ಹಾಕುವಂತಿಲ್ಲ. ರಾಜಕೀಯ ಕಾರ್ಯಕ್ರಮದ ಬಗ್ಗೆಯೂ ಪೂರ್ವಾನುಮತಿ ಪಡೆದು ಬಂಟಿಂಗ್ಸ್ ಹಾಕಬಹುದು ಎಂದರು.
Mangalore Dc office breaks conduct of conduct during elections, BJP leaders photo frame remains at office.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm