ಎಸ್ಸೆಸ್ಸೆಲ್ಸಿ ಪರೀಕ್ಷೆ ಭಯ ; ನದಿಗೆ ಹಾರಿ ಸಾವಿಗೆ ಶರಣಾದನೇ ಹತ್ತನೇ ತರಗತಿ ವಿದ್ಯಾರ್ಥಿ ?!  

30-03-23 10:20 pm       Mangalore Correspondent   ಕರಾವಳಿ

ಪರೀಕ್ಷೆಗೆ ಎರಡು ದಿನ ಇರುವಾಗ ಮನೆಗೆ ಬಾರದೆ ನಾಪತ್ತೆಯಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಕಡಬ ತಾಲೂಕಿನ ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ ಎಂಬವರ ಮಗ 10ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15) ಮೃತ ವಿದ್ಯಾರ್ಥಿ. 

ಪುತ್ತೂರು, ಮಾ.30 : ಪರೀಕ್ಷೆಗೆ ಎರಡು ದಿನ ಇರುವಾಗ ಮನೆಗೆ ಬಾರದೆ ನಾಪತ್ತೆಯಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಕಡಬ ತಾಲೂಕಿನ ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ ಎಂಬವರ ಮಗ 10ನೇ ತರಗತಿ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15) ಮೃತ ವಿದ್ಯಾರ್ಥಿ. 

ಬುಧವಾರ ಸಂಜೆ ಮನೆಯಿಂದ ನಾಪತ್ತೆಯಾಗಿದ್ದ ಅದ್ವೈತ್ ನನ್ನು ರಾತ್ರಿಯಿಡೀ ಮನೆಯವರು ಹುಡುಕಾಟ ನಡೆಸಿದ್ದಾರೆ. ಬೆಳಗ್ಗೆ ವರೆಗೂ ಬಾಲಕ ಪತ್ತೆಯಾಗಿರಲಿಲ್ಲ, ಇಂದು ಬೆಳಗ್ಗೆ ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಬ್ಯಾಗ್ ಪತ್ತೆಯಾಗಿತ್ತು.

ಹಾಗಾಗಿ ಪುತ್ತೂರು ಅಗ್ನಿಶಾಮಕ ದಳದ ಸಿಬಂದಿ ನದಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಭಯದಿಂದ ವಿದ್ಯಾರ್ಥಿ ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಮಾ.31ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು ಎರಡು ದಿನ ಇರುವಾಗ ಸಾವಿಗೀಡಾಗಿದ್ದು ಅಚ್ಚರಿ ಮೂಡಿಸಿದೆ. ಪರೀಕ್ಷೆ ಭಯದಿಂದಲೇ ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಕಡಬ, ಬೆಳ್ಳಾರೆ ಪೋಲೀಸರು ಸ್ಥಳದಲ್ಲಿ ಪರಿಶೀಲನೆ  ನಡೆಸಿದ್ದಾರೆ.

A class tenth student ended life by jumping into a river in this district of Karnataka on Thursday.  The class 10th board exams are scheduled to begin from Friday (March 31). Preliminary investigations revealed that 15-year-old Advaith Shetty took the extreme step due to exam stress. The incident was reported from Gundimajal village near Kodimbala in Kadaba taluk near Mangaluru.