ಬ್ರೇಕಿಂಗ್ ನ್ಯೂಸ್
31-03-23 10:49 pm Mangalore Correspondent ಕರಾವಳಿ
ಮಂಗಳೂರು, ಮಾ.31: ಹಿಂದು ಸಂಘಟನೆಯ ರೆಬಲ್ ಮುಖಂಡ, ಬಿಲ್ಲವ ವೇದಿಕೆಯ ಮುಂದಾಳು ಸತ್ಯಜಿತ್ ಸುರತ್ಕಲ್ ಅವರಿಗೆ ಕಳೆದ 16 ವರ್ಷಗಳಿಂದ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನು ಚುನಾವಣೆ ಹೊಸ್ತಿಲಲ್ಲಿ ತೆಗೆದು ಹಾಕಲಾಗಿದೆ.
ಪೊಳಲಿ ಅನಂತು, ಸುಖಾನಂದ ಶೆಟ್ಟಿ ಇನ್ನಿತರ ಹಿಂದು ಮುಖಂಡರ ಸರಣಿ ಕೊಲೆಯಾದ ಹಿನ್ನೆಲೆಯಲ್ಲಿ 2006ರಲ್ಲಿ ಸತ್ಯಜಿತ್ ಸುರತ್ಕಲ್ ಅವರಿಗೆ ಪೊಲೀಸ್ ಇಲಾಖೆಯಿಂದ ಗನ್ ಮೆನ್ ನೀಡಲಾಗಿತ್ತು. ಅಂದಿನಿಂದ ಇಂದಿನ ವರೆಗೂ ಪೊಲೀಸ್ ಭದ್ರತೆ ನೀಡಲಾಗಿತ್ತು. ಆದರೆ ಇತ್ತೀಚೆಗೆ ಒಂದು ತಿಂಗಳ ಹಿಂದೆ ಮಂಗಳೂರು ಪೊಲೀಸರು ನೋಟೀಸ್ ನೀಡಿ, ನಿಮಗೆ ಸರಕಾರದ ಕಡೆಯಿಂದ ಪೊಲೀಸ್ ಭದ್ರತೆ ಅಗತ್ಯವಿಲ್ಲ. ನೀವು ಬೇಕಿದ್ದರೆ ನಿಗದಿತ ಮೊತ್ತ ಪಾವತಿಸಿ ಭದ್ರತೆ ಪಡೆಯಬಹುದು ಎಂದು ತಿಳಿಸಿದ್ದರು.
ಅದಕ್ಕೆ ಸತ್ಯಜಿತ್ ಅವರು ತನಗೆ ಲಕ್ಷಾಂತರ ರೂಪಾಯಿ ಪಾವತಿಸಿ ಭದ್ರತೆ ಪಡೆಯಲು ಸಾಧ್ಯವಿಲ್ಲ. ಜೀವಕ್ಕೆ ಅಪಾಯ ಇದೆ, ಸರಕಾರದ ಕಡೆಯಿಂದಲೇ ಭದ್ರತೆ ನೀಡಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದರು. ಈ ಬಗ್ಗೆ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಸಂಘ ಪರಿವಾರದ ಮುಖಂಡರಿಗೂ ಸತ್ಯಜಿತ್ ಮಾಹಿತಿ ನೀಡಿದ್ದರು. ಆದರೆ ಚುನಾವಣೆ ಘೋಷಣೆ ಆಗೋ ವರೆಗೂ ಸುಮ್ಮನಿದ್ದ ಮಂಗಳೂರು ಪೊಲೀಸರು ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಗನ್ ಮೆನ್ ಭದ್ರತೆ ಹಿಂಪಡೆದಿದ್ದಾರೆ. ಈಗ ರಾಜ್ಯ ಸರಕಾರಕ್ಕೆ ಹೇಗೂ ನಿರ್ಧರಿಸಲು ಸಾಧ್ಯವಿಲ್ಲ. ಹೀಗಾಗಿ ಸೂಕ್ತ ಕಾಲದಲ್ಲಿ ಗನ್ ಮೆನ್ ತೆಗೆದಿದ್ದಾರೆ ಎಂದು ಸತ್ಯಜಿತ್ ಪ್ರತಿಕ್ರಿಯಿಸಿದ್ದಾರೆ.
Government removes Gun Man for BJP leader Satyajith Surathkal who was for 16 years due to elections. Sukhananda Shetty, who was active in Hindu organizations and BJP and was emerging as a leader with high organizational capacity, had been attacked with sharp weapons by a gang which arrived in a Qualis vehicle near the Marble Trading Company at Honnakatte Kulai on December 1, 2006.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm