ಬ್ರೇಕಿಂಗ್ ನ್ಯೂಸ್
31-03-23 10:49 pm Mangalore Correspondent ಕರಾವಳಿ
ಮಂಗಳೂರು, ಮಾ.31: ಹಿಂದು ಸಂಘಟನೆಯ ರೆಬಲ್ ಮುಖಂಡ, ಬಿಲ್ಲವ ವೇದಿಕೆಯ ಮುಂದಾಳು ಸತ್ಯಜಿತ್ ಸುರತ್ಕಲ್ ಅವರಿಗೆ ಕಳೆದ 16 ವರ್ಷಗಳಿಂದ ನೀಡಲಾಗಿದ್ದ ಪೊಲೀಸ್ ಭದ್ರತೆಯನ್ನು ಚುನಾವಣೆ ಹೊಸ್ತಿಲಲ್ಲಿ ತೆಗೆದು ಹಾಕಲಾಗಿದೆ.
ಪೊಳಲಿ ಅನಂತು, ಸುಖಾನಂದ ಶೆಟ್ಟಿ ಇನ್ನಿತರ ಹಿಂದು ಮುಖಂಡರ ಸರಣಿ ಕೊಲೆಯಾದ ಹಿನ್ನೆಲೆಯಲ್ಲಿ 2006ರಲ್ಲಿ ಸತ್ಯಜಿತ್ ಸುರತ್ಕಲ್ ಅವರಿಗೆ ಪೊಲೀಸ್ ಇಲಾಖೆಯಿಂದ ಗನ್ ಮೆನ್ ನೀಡಲಾಗಿತ್ತು. ಅಂದಿನಿಂದ ಇಂದಿನ ವರೆಗೂ ಪೊಲೀಸ್ ಭದ್ರತೆ ನೀಡಲಾಗಿತ್ತು. ಆದರೆ ಇತ್ತೀಚೆಗೆ ಒಂದು ತಿಂಗಳ ಹಿಂದೆ ಮಂಗಳೂರು ಪೊಲೀಸರು ನೋಟೀಸ್ ನೀಡಿ, ನಿಮಗೆ ಸರಕಾರದ ಕಡೆಯಿಂದ ಪೊಲೀಸ್ ಭದ್ರತೆ ಅಗತ್ಯವಿಲ್ಲ. ನೀವು ಬೇಕಿದ್ದರೆ ನಿಗದಿತ ಮೊತ್ತ ಪಾವತಿಸಿ ಭದ್ರತೆ ಪಡೆಯಬಹುದು ಎಂದು ತಿಳಿಸಿದ್ದರು.
ಅದಕ್ಕೆ ಸತ್ಯಜಿತ್ ಅವರು ತನಗೆ ಲಕ್ಷಾಂತರ ರೂಪಾಯಿ ಪಾವತಿಸಿ ಭದ್ರತೆ ಪಡೆಯಲು ಸಾಧ್ಯವಿಲ್ಲ. ಜೀವಕ್ಕೆ ಅಪಾಯ ಇದೆ, ಸರಕಾರದ ಕಡೆಯಿಂದಲೇ ಭದ್ರತೆ ನೀಡಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದರು. ಈ ಬಗ್ಗೆ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಸಂಘ ಪರಿವಾರದ ಮುಖಂಡರಿಗೂ ಸತ್ಯಜಿತ್ ಮಾಹಿತಿ ನೀಡಿದ್ದರು. ಆದರೆ ಚುನಾವಣೆ ಘೋಷಣೆ ಆಗೋ ವರೆಗೂ ಸುಮ್ಮನಿದ್ದ ಮಂಗಳೂರು ಪೊಲೀಸರು ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಗನ್ ಮೆನ್ ಭದ್ರತೆ ಹಿಂಪಡೆದಿದ್ದಾರೆ. ಈಗ ರಾಜ್ಯ ಸರಕಾರಕ್ಕೆ ಹೇಗೂ ನಿರ್ಧರಿಸಲು ಸಾಧ್ಯವಿಲ್ಲ. ಹೀಗಾಗಿ ಸೂಕ್ತ ಕಾಲದಲ್ಲಿ ಗನ್ ಮೆನ್ ತೆಗೆದಿದ್ದಾರೆ ಎಂದು ಸತ್ಯಜಿತ್ ಪ್ರತಿಕ್ರಿಯಿಸಿದ್ದಾರೆ.
Government removes Gun Man for BJP leader Satyajith Surathkal who was for 16 years due to elections. Sukhananda Shetty, who was active in Hindu organizations and BJP and was emerging as a leader with high organizational capacity, had been attacked with sharp weapons by a gang which arrived in a Qualis vehicle near the Marble Trading Company at Honnakatte Kulai on December 1, 2006.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm