ಬ್ರೇಕಿಂಗ್ ನ್ಯೂಸ್
03-04-23 04:46 pm Mangalore Correspondent ಕರಾವಳಿ
ಮಂಗಳೂರು, ಎ.3: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಹೆಸರಲ್ಲಿ ರಾಜ್ಯ ಮಟ್ಟದ ಶೌರ್ಯ ಪ್ರಶಸ್ತಿ ಸ್ಥಾಪಿಸಲಾಗಿದ್ದು ಮೊದಲ ಪ್ರಶಸ್ತಿಯನ್ನು ಬೆಳ್ತಂಗಡಿ ಮೂಲದ ಯೋಧ ಸುಬೇದಾರ್ ಏಕನಾಥ ಶೆಟ್ಟಿ ಅವರಿಗೆ ಮರಣೋತ್ತರವಾಗಿ ನೀಡಲು ನಿರ್ಧರಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ ಅಧ್ಯಕ್ಷ ಎಂ.ಬಿ.ಕಿರಣ್ ಬುಡ್ಲೆಗುತ್ತು, 1834ರಿಂದ 1837ರ ವರೆಗೆ ಮೊದಲ ಬಾರಿಗೆ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿ ತುಳುನಾಡಿನ ಅನೇಕ ರೈತರು ಬಲಿದಾನ ಮಾಡಿದ್ದಾರೆ. ಹೋರಾಟಗಾರರು ಕೆದಂಬಾಡಿ ರಾಮಯ್ಯ ಗೌಡ ನೇತೃತ್ವದಲ್ಲಿ ಸುಳ್ಯದಿಂದ ಹೊರಟು ಮಂಗಳೂರಿಗೆ ಮುತ್ತಿಗೆ ಹಾಕಿ, ಬ್ರಿಟಿಷರನ್ನು ಓಡಿಸಿ ನಗರದ ಬಾವುಟಗುಡ್ಡೆಯಲ್ಲಿ 1837ರ ಎ. 5ರಂದು ವಿಜಯ ಪತಾಕೆ ಹಾರಿಸಿ ಹಾರಿಸಿದ್ದರು. ಅದು ಮೊದಲ ಬಾರಿಗೆ ಸ್ವಾತಂತ್ರ್ಯದ ಕಿಡಿ ಹೊತ್ತಿಸಿದ ಸಂಘಟಿತ ಹೋರಾಟವಾಗಿದ್ದು ಇದರ ಸ್ಮರಣಾರ್ಥ ಕಳೆದ ವರ್ಷ ಬಾವುಟಗುಡ್ಡೆಯಲ್ಲಿ ರಾಮಯ್ಯ ಗೌಡ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಅವರ ಹೆಸರಿನಲ್ಲಿ ಈ ವರ್ಷದಿಂದ ಶೌರ್ಯ ಪ್ರಶಸ್ತಿಯನ್ನು ಆರಂಭಿಸಲಾಗಿದೆ ಎಂದರು.
ಭಾರತೀಯ ಭೂಸೇನೆ ಮತ್ತು ವಾಯು ಸೇನೆಗಳಲ್ಲಿ ಕರ್ತವ್ಯ ನಿರ್ವಹಿಸಿ ಮರೆಯಾಗಿದ್ದ ಸುಬೇದಾರ್ ಏಕನಾಥ ಶೆಟ್ಟಿ ಅವರನ್ನು ಶೌರ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಾಯು ಸೇನೆಯಲ್ಲಿದ್ದ ಏಕನಾಥ ಶೆಟ್ಟಿ ನಿಗೂಢ ಕಣ್ಮರೆಯಾಗಿದ್ದರು. 2016ರಲ್ಲಿ ಅಂಡಮಾನ್ ನಿಕೋಬಾರ್ನ ಪೋರ್ಟ್ಬ್ಲೇರ್ಗೆ ತೆರಳುತ್ತಿದ್ದ ವಿಮಾನ ಸಮುದ್ರದ ಮಧ್ಯೆ ನಿಗೂಢವಾಗಿ ಕಣ್ಮರೆಯಾಗಿತ್ತು. ಆ ವಿಮಾನದಲ್ಲಿ ಸುಬೇದಾರ್ ಏಕನಾಥ ಶೆಟ್ಟಿ ಇದ್ದರು ಎಂದರು.
ಸೇಂಟ್ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನ ಲೊಯೋಲಾ ಸಭಾಂಗಣದಲ್ಲಿ ಇದೇ ಎ.5ರಂದು ಬೆಳಗ್ಗೆ 10.30ರಿಂದ ಅಮರ ಸುಳ್ಯ ಸಂಸ್ಮರಣಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಸಮಾರಂಭದಲ್ಲಿ ಏಕನಾಥ ಶೆಟ್ಟಿ ಕುಟುಂಬಸ್ಥರಿಗೆ ₹ 50 ಸಾವಿರ ನಗದನ್ನು ಒಳಗೊಂಡ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ’ ಎಂದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷ ಪಿ.ಎಚ್.ಆನಂದ್ ನೆರಿಯ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ, ಪ್ರಧಾನ ಸಂಚಾಲಕ ಭಾಸ್ಕರ ದೇವಸ್ಯ ಹಾಗೂ ಖಜಾಂಚಿ ಶಿವರಾಮ ಗೌಡ ನಿನ್ನಿಕಲ್ ಇದ್ದರು.
Mangalore Kedambadi Ramaiah Gowda award to Subedar Eknath Shetty.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm