ಬ್ರೇಕಿಂಗ್ ನ್ಯೂಸ್
04-04-23 01:21 pm Mangalore Correspondent ಕರಾವಳಿ
ಮಂಗಳೂರು, ಎ.4 : ಮಾನವೀಯ ಕಾರ್ಯಕ್ಕೆ ಮನಸ್ಸು ಮುಖ್ಯ ಅಂತಾರೆ. ಇಲ್ಲೊಬ್ಬರು ವೃದ್ಧ ಮಹಿಳೆ ತನ್ನ ಮನೆ ಬಳಿಯ ರೈಲು ಹಳಿಯಲ್ಲಿ ಬೃಹತ್ ಮರ ಬಿದ್ದಿರುವುದನ್ನು ಕಂಡು ತಾನೇ ತರಾತುರಿಯಲ್ಲಿ ಕೆಂಪು ವಸ್ತ್ರ ತೋರಿಸಿ ರೈಲು ನಿಲ್ಲಿಸಿ ಸಂಭಾವ್ಯ ಅನಾಹುತ ತಪ್ಪಿಸಿದ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿಯ ನಿವಾಸಿ, 70 ವರ್ಷದ ಚಂದ್ರಾವತಿ ಸಮಯ ಪ್ರಜ್ಞೆ ಮೆರೆದ ಮಹಿಳೆ. ಮನೆ ಬಳಿಯ ತೋಟಕ್ಕೆ ತೆರಳಿದ್ದ ಮಹಿಳೆ ರೈಲು ಹಳಿಗೆ ಮರ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಗೆ ತೆರಳಿ ಅಕ್ಕಪಕ್ಕದವರನ್ನು ಫೋನ್ ಮಾಡಿ ಕರೆಯೋಣ ಎಂದು ದಾಪುಗಾಲು ಹಾಕುತ್ತಿದ್ದಾಗಲೇ ಮಹಿಳೆಗೆ ರೈಲಿನ ಹಾರನ್ ಕೇಳಿಸಿತ್ತು.
ಕೂಡಲೇ ಮನೆಗೆ ತೆರಳಿದ ಮಹಿಳೆ, ಕೆಂಪು ಬಟ್ಟೆಯನ್ನು ಹಿಡಿದು ರೈಲು ಹಳಿಯತ್ತ ಓಡಿದ್ದಾರೆ. ರೈಲು ಬರುತ್ತಿದ್ದ ಜಾಗದಿಂದ ಇನ್ನೊಂದು ಬದಿಯ ಹಳಿಯಲ್ಲಿ ನಿಂತು ಕೆಂಪು ಬಟ್ಟೆ ತೋರಿಸಿ ಅಪಾಯದ ಮುನ್ಸೂಚನೆ ನೀಡಿದ್ದಾರೆ. ಇದನ್ನು ಗಮನಿಸಿದ ಲೋಕೋ ಪೈಲಟ್ ರೈಲನ್ನು ನಿಧಾನಗೊಳಿಸಿದ್ದು ಹತ್ತಿರ ಬಂದಂತೆ ಮುಂದೆ ಹಳಿಗೆ ಅಡ್ಡಲಾಗಿ ಮರ ಬಿದ್ದಿರುವುದು ಕಂಡುಬಂದಿದೆ. ಆನಂತರ, ರೈಲು ನಿಲ್ಲಿಸಿ ರೈಲ್ವೇ ಸಿಬಂದಿ ಮತ್ತು ಸ್ಥಳೀಯರು ಸೇರಿ ಮರವನ್ನು ಕಡಿದು ತೆರವುಗೊಳಿಸಿದ್ದಾರೆ.
ರೈಲು ಹಳಿಗೆ ಮರ ಬಿದ್ದಿದ್ದನ್ನ ಕಂಡು ಸಂಭಾವ್ಯ ಅನಾಹುತ ತಪ್ಪಿಸಿದ ವೃದ್ಧ ಮಹಿಳೆಯನ್ನು ಸ್ಥಳೀಯರು ಮತ್ತು ರೈಲು ಸಿಬಂದಿ ಪ್ರಶಂಸೆ ಮಾಡಿದ್ದಾರೆ. ಮಂಗಳೂರು- ಮುಂಬೈ ಸಂಚರಿಸುವ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅದಾಗಿದ್ದು ವೇಗವಾಗಿ ಮರದ ಮೇಲಿನಿಂದ ತೆರಳುತ್ತಿದ್ದರೆ ಹಳಿ ತಪ್ಪುವ ಅಪಾಯ ಇತ್ತು.
Mangalore 70 year old woman averts major train accident at Pachanady betweens Padil Jokatte. Chandravati, who lives in Mandara near Pachanady, noticed a tree had fallen on the train track just as the Matsyagandha train was making its way from Mangaluru to Mumbai.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm