ಬ್ರೇಕಿಂಗ್ ನ್ಯೂಸ್
04-04-23 01:21 pm Mangalore Correspondent ಕರಾವಳಿ
ಮಂಗಳೂರು, ಎ.4 : ಮಾನವೀಯ ಕಾರ್ಯಕ್ಕೆ ಮನಸ್ಸು ಮುಖ್ಯ ಅಂತಾರೆ. ಇಲ್ಲೊಬ್ಬರು ವೃದ್ಧ ಮಹಿಳೆ ತನ್ನ ಮನೆ ಬಳಿಯ ರೈಲು ಹಳಿಯಲ್ಲಿ ಬೃಹತ್ ಮರ ಬಿದ್ದಿರುವುದನ್ನು ಕಂಡು ತಾನೇ ತರಾತುರಿಯಲ್ಲಿ ಕೆಂಪು ವಸ್ತ್ರ ತೋರಿಸಿ ರೈಲು ನಿಲ್ಲಿಸಿ ಸಂಭಾವ್ಯ ಅನಾಹುತ ತಪ್ಪಿಸಿದ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿಯ ನಿವಾಸಿ, 70 ವರ್ಷದ ಚಂದ್ರಾವತಿ ಸಮಯ ಪ್ರಜ್ಞೆ ಮೆರೆದ ಮಹಿಳೆ. ಮನೆ ಬಳಿಯ ತೋಟಕ್ಕೆ ತೆರಳಿದ್ದ ಮಹಿಳೆ ರೈಲು ಹಳಿಗೆ ಮರ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಗೆ ತೆರಳಿ ಅಕ್ಕಪಕ್ಕದವರನ್ನು ಫೋನ್ ಮಾಡಿ ಕರೆಯೋಣ ಎಂದು ದಾಪುಗಾಲು ಹಾಕುತ್ತಿದ್ದಾಗಲೇ ಮಹಿಳೆಗೆ ರೈಲಿನ ಹಾರನ್ ಕೇಳಿಸಿತ್ತು.
ಕೂಡಲೇ ಮನೆಗೆ ತೆರಳಿದ ಮಹಿಳೆ, ಕೆಂಪು ಬಟ್ಟೆಯನ್ನು ಹಿಡಿದು ರೈಲು ಹಳಿಯತ್ತ ಓಡಿದ್ದಾರೆ. ರೈಲು ಬರುತ್ತಿದ್ದ ಜಾಗದಿಂದ ಇನ್ನೊಂದು ಬದಿಯ ಹಳಿಯಲ್ಲಿ ನಿಂತು ಕೆಂಪು ಬಟ್ಟೆ ತೋರಿಸಿ ಅಪಾಯದ ಮುನ್ಸೂಚನೆ ನೀಡಿದ್ದಾರೆ. ಇದನ್ನು ಗಮನಿಸಿದ ಲೋಕೋ ಪೈಲಟ್ ರೈಲನ್ನು ನಿಧಾನಗೊಳಿಸಿದ್ದು ಹತ್ತಿರ ಬಂದಂತೆ ಮುಂದೆ ಹಳಿಗೆ ಅಡ್ಡಲಾಗಿ ಮರ ಬಿದ್ದಿರುವುದು ಕಂಡುಬಂದಿದೆ. ಆನಂತರ, ರೈಲು ನಿಲ್ಲಿಸಿ ರೈಲ್ವೇ ಸಿಬಂದಿ ಮತ್ತು ಸ್ಥಳೀಯರು ಸೇರಿ ಮರವನ್ನು ಕಡಿದು ತೆರವುಗೊಳಿಸಿದ್ದಾರೆ.
ರೈಲು ಹಳಿಗೆ ಮರ ಬಿದ್ದಿದ್ದನ್ನ ಕಂಡು ಸಂಭಾವ್ಯ ಅನಾಹುತ ತಪ್ಪಿಸಿದ ವೃದ್ಧ ಮಹಿಳೆಯನ್ನು ಸ್ಥಳೀಯರು ಮತ್ತು ರೈಲು ಸಿಬಂದಿ ಪ್ರಶಂಸೆ ಮಾಡಿದ್ದಾರೆ. ಮಂಗಳೂರು- ಮುಂಬೈ ಸಂಚರಿಸುವ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅದಾಗಿದ್ದು ವೇಗವಾಗಿ ಮರದ ಮೇಲಿನಿಂದ ತೆರಳುತ್ತಿದ್ದರೆ ಹಳಿ ತಪ್ಪುವ ಅಪಾಯ ಇತ್ತು.
Mangalore 70 year old woman averts major train accident at Pachanady betweens Padil Jokatte. Chandravati, who lives in Mandara near Pachanady, noticed a tree had fallen on the train track just as the Matsyagandha train was making its way from Mangaluru to Mumbai.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm