ಬ್ರೇಕಿಂಗ್ ನ್ಯೂಸ್
04-04-23 01:21 pm Mangalore Correspondent ಕರಾವಳಿ
ಮಂಗಳೂರು, ಎ.4 : ಮಾನವೀಯ ಕಾರ್ಯಕ್ಕೆ ಮನಸ್ಸು ಮುಖ್ಯ ಅಂತಾರೆ. ಇಲ್ಲೊಬ್ಬರು ವೃದ್ಧ ಮಹಿಳೆ ತನ್ನ ಮನೆ ಬಳಿಯ ರೈಲು ಹಳಿಯಲ್ಲಿ ಬೃಹತ್ ಮರ ಬಿದ್ದಿರುವುದನ್ನು ಕಂಡು ತಾನೇ ತರಾತುರಿಯಲ್ಲಿ ಕೆಂಪು ವಸ್ತ್ರ ತೋರಿಸಿ ರೈಲು ನಿಲ್ಲಿಸಿ ಸಂಭಾವ್ಯ ಅನಾಹುತ ತಪ್ಪಿಸಿದ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿಯ ನಿವಾಸಿ, 70 ವರ್ಷದ ಚಂದ್ರಾವತಿ ಸಮಯ ಪ್ರಜ್ಞೆ ಮೆರೆದ ಮಹಿಳೆ. ಮನೆ ಬಳಿಯ ತೋಟಕ್ಕೆ ತೆರಳಿದ್ದ ಮಹಿಳೆ ರೈಲು ಹಳಿಗೆ ಮರ ಬಿದ್ದಿರುವುದನ್ನು ಗಮನಿಸಿದ್ದಾರೆ. ಮನೆಗೆ ತೆರಳಿ ಅಕ್ಕಪಕ್ಕದವರನ್ನು ಫೋನ್ ಮಾಡಿ ಕರೆಯೋಣ ಎಂದು ದಾಪುಗಾಲು ಹಾಕುತ್ತಿದ್ದಾಗಲೇ ಮಹಿಳೆಗೆ ರೈಲಿನ ಹಾರನ್ ಕೇಳಿಸಿತ್ತು.
ಕೂಡಲೇ ಮನೆಗೆ ತೆರಳಿದ ಮಹಿಳೆ, ಕೆಂಪು ಬಟ್ಟೆಯನ್ನು ಹಿಡಿದು ರೈಲು ಹಳಿಯತ್ತ ಓಡಿದ್ದಾರೆ. ರೈಲು ಬರುತ್ತಿದ್ದ ಜಾಗದಿಂದ ಇನ್ನೊಂದು ಬದಿಯ ಹಳಿಯಲ್ಲಿ ನಿಂತು ಕೆಂಪು ಬಟ್ಟೆ ತೋರಿಸಿ ಅಪಾಯದ ಮುನ್ಸೂಚನೆ ನೀಡಿದ್ದಾರೆ. ಇದನ್ನು ಗಮನಿಸಿದ ಲೋಕೋ ಪೈಲಟ್ ರೈಲನ್ನು ನಿಧಾನಗೊಳಿಸಿದ್ದು ಹತ್ತಿರ ಬಂದಂತೆ ಮುಂದೆ ಹಳಿಗೆ ಅಡ್ಡಲಾಗಿ ಮರ ಬಿದ್ದಿರುವುದು ಕಂಡುಬಂದಿದೆ. ಆನಂತರ, ರೈಲು ನಿಲ್ಲಿಸಿ ರೈಲ್ವೇ ಸಿಬಂದಿ ಮತ್ತು ಸ್ಥಳೀಯರು ಸೇರಿ ಮರವನ್ನು ಕಡಿದು ತೆರವುಗೊಳಿಸಿದ್ದಾರೆ.
ರೈಲು ಹಳಿಗೆ ಮರ ಬಿದ್ದಿದ್ದನ್ನ ಕಂಡು ಸಂಭಾವ್ಯ ಅನಾಹುತ ತಪ್ಪಿಸಿದ ವೃದ್ಧ ಮಹಿಳೆಯನ್ನು ಸ್ಥಳೀಯರು ಮತ್ತು ರೈಲು ಸಿಬಂದಿ ಪ್ರಶಂಸೆ ಮಾಡಿದ್ದಾರೆ. ಮಂಗಳೂರು- ಮುಂಬೈ ಸಂಚರಿಸುವ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅದಾಗಿದ್ದು ವೇಗವಾಗಿ ಮರದ ಮೇಲಿನಿಂದ ತೆರಳುತ್ತಿದ್ದರೆ ಹಳಿ ತಪ್ಪುವ ಅಪಾಯ ಇತ್ತು.
Mangalore 70 year old woman averts major train accident at Pachanady betweens Padil Jokatte. Chandravati, who lives in Mandara near Pachanady, noticed a tree had fallen on the train track just as the Matsyagandha train was making its way from Mangaluru to Mumbai.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm