ಬ್ರೇಕಿಂಗ್ ನ್ಯೂಸ್
06-04-23 11:31 pm Udupi Staffer ಕರಾವಳಿ
ಉಡುಪಿ, ಎ.6: ಉಡುಪಿ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಅಸಮಾಧಾನ ಸ್ಫೋಟಗೊಂಡಿದ್ದು ಮೀನುಗಾರ ಸಮುದಾಯದ ಉದ್ಯಮಿ ಪ್ರಸಾದ್ ಕಾಂಚನ್ ಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿ ಎಂಟು ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್, ಅಮೃತ್ ಶೆಣೈ, ಕೃಷ್ಣಮೂರ್ತಿ ಆಚಾರ್ಯ ಸಹಿತ ಎಂಟು ಮಂದಿ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದರು. ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಟಿಕೆಟ್ ಯುವ ಉದ್ಯಮಿ ಪ್ರಸಾದ್ ಕಾಂಚನ್ ಪಾಲಾಗಿದೆ.
ಇದರ ಬೆನ್ನಲ್ಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಅಸಮಾಧಾನ ಸ್ಫೋಟವಾಗಿದ್ದು ಪ್ರಬಲ ಆಕಾಂಕ್ಷಿ ಕೃಷ್ಣಮೂರ್ತಿ ಆಚಾರ್ಯ ಗುರುವಾರ ಸಂಜೆ ಬೆಂಬಲಿಗರ ಸಭೆ ನಡೆಸಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅಭಿಮಾನಿಗಳ ಸಭೆಯಲ್ಲಿ ಘೋಷಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು ವೈಯಕ್ತಿಕ ಕಾರಣಗಳಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಉಡುಪಿ ಮಠದ ಬಳಿಯ ಮಥುರಾ ಛತ್ರ ಹೊಟೇಲ್ ನಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ಮೊನ್ನೆ ಬಂದವರಿಗೆ ಟಿಕೆಟ್ ನೀಡಿ ನನಗೆ ಅನ್ಯಾಯ ಮಾಡಲಾಗಿದೆ. ಅಭಿಮಾನಿಗಳ ಸಹಕಾರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಸಭೆಯಲ್ಲಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದರು
Krishnamurthy Acharya, a ticket aspirant for the Congress party in the Udupi assembly constituency, has resigned from the party's primary membership. The announcement was made on Thursday, April 06.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm