ಬ್ರೇಕಿಂಗ್ ನ್ಯೂಸ್
06-04-23 11:31 pm Udupi Staffer ಕರಾವಳಿ
ಉಡುಪಿ, ಎ.6: ಉಡುಪಿ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಅಸಮಾಧಾನ ಸ್ಫೋಟಗೊಂಡಿದ್ದು ಮೀನುಗಾರ ಸಮುದಾಯದ ಉದ್ಯಮಿ ಪ್ರಸಾದ್ ಕಾಂಚನ್ ಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿ ಎಂಟು ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಬ್ಲಾಕ್ ಅಧ್ಯಕ್ಷ ರಮೇಶ್ ಕಾಂಚನ್, ಅಮೃತ್ ಶೆಣೈ, ಕೃಷ್ಣಮೂರ್ತಿ ಆಚಾರ್ಯ ಸಹಿತ ಎಂಟು ಮಂದಿ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದರು. ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಟಿಕೆಟ್ ಯುವ ಉದ್ಯಮಿ ಪ್ರಸಾದ್ ಕಾಂಚನ್ ಪಾಲಾಗಿದೆ.
ಇದರ ಬೆನ್ನಲ್ಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಅಸಮಾಧಾನ ಸ್ಫೋಟವಾಗಿದ್ದು ಪ್ರಬಲ ಆಕಾಂಕ್ಷಿ ಕೃಷ್ಣಮೂರ್ತಿ ಆಚಾರ್ಯ ಗುರುವಾರ ಸಂಜೆ ಬೆಂಬಲಿಗರ ಸಭೆ ನಡೆಸಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅಭಿಮಾನಿಗಳ ಸಭೆಯಲ್ಲಿ ಘೋಷಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು ವೈಯಕ್ತಿಕ ಕಾರಣಗಳಿಂದ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಉಡುಪಿ ಮಠದ ಬಳಿಯ ಮಥುರಾ ಛತ್ರ ಹೊಟೇಲ್ ನಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ಮೊನ್ನೆ ಬಂದವರಿಗೆ ಟಿಕೆಟ್ ನೀಡಿ ನನಗೆ ಅನ್ಯಾಯ ಮಾಡಲಾಗಿದೆ. ಅಭಿಮಾನಿಗಳ ಸಹಕಾರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಸಭೆಯಲ್ಲಿ ನೂರಾರು ಮಂದಿ ಅಭಿಮಾನಿಗಳು ಸೇರಿದ್ದರು
Krishnamurthy Acharya, a ticket aspirant for the Congress party in the Udupi assembly constituency, has resigned from the party's primary membership. The announcement was made on Thursday, April 06.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm