ಬ್ರೇಕಿಂಗ್ ನ್ಯೂಸ್
08-04-23 07:52 pm Mangaluru correspondent ಕರಾವಳಿ
ಮಂಗಳೂರು, ಎ.8: ಮುಸ್ಲಿಂ ಸಮುದಾಯದ ಬಪ್ಪ ಬ್ಯಾರಿ ನಿರ್ಮಿಸಿದ ದೇವಸ್ಥಾನ ಎಂಬ ಐತಿಹ್ಯ ಹೊಂದಿರುವ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಿಂದುಯೇತರರ ವ್ಯಾಪಾರಕ್ಕೆ ನಿರ್ಬಂಧ ಹೇರಿ, ಬ್ಯಾನರ್ ಹಾಕಲಾಗಿದೆ. ದೇವಸ್ಥಾನದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ದೇಗುಲ ಪರಿಸರದಲ್ಲಿ ನಿಷೇಧ ವಿಧಿಸಲಾಗಿದ್ದು ಚುನಾವಣೆ ಹೊತ್ತಲ್ಲಿ ಧಾರ್ಮಿಕ ಸೌಹಾರ್ದ ಕೆಡಿಸುವ ಯತ್ನ ಎಂಬ ಆಕ್ಷೇಪ ವ್ಯಕ್ತವಾಗಿದೆ.
ಬಪ್ಪನಾಡು ದೇವಸ್ಥಾನದಲ್ಲಿ ಇದೇ ಎಪ್ರಿಲ್ 11ರಂದು ಹಗಲು ರಥೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಭಕ್ತರು ದೇವರ ಶಯನಕ್ಕೆ ಮಲ್ಲಿಗೆಯ ಹರಕೆಯನ್ನು ತೀರಿಸುವ ಸಂಪ್ರದಾಯವಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಮಲ್ಲಿಗೆ ಹೂ ಮಾರಾಟವಾಗುತ್ತದೆ.
ಹಿಂದಿನಿಂದಲೂ ಇಲ್ಲಿ ಮುಸ್ಲಿಂ ಹಾಗೂ ಹಿಂದು ವ್ಯಾಪಾರಿಗಳು ಜೊತೆಯಾಗಿಯೇ ಮಲ್ಲಿಗೆ ಇನ್ನಿತರ ವ್ಯಾಪಾರ ನಡೆಸುತ್ತ ಬಂದಿದ್ದರು. ಕಳೆದ ವರ್ಷ ಹಿಜಾಬ್ ಗಲಾಟೆ ಬಳಿಕ ಮುಜರಾಯಿ ಇಲಾಖೆ ದೇವಸ್ಥಾನ ಪರಿಸರದಲ್ಲಿ ಮುಸ್ಲಿಮ್ ವ್ಯಾಪಾರಿಗಳನ್ನು ದೂರ ಇಡಬೇಕೆಂದು ಹಿಂದು ಸಂಘಟನೆಗಳು ಆಗ್ರಹಿಸಿದ್ದವು. 2022ರ ಜಾತ್ರೆ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಹಳೆಯ ನಿಯಮವನ್ನು ಮುಂದಿಟ್ಟು ಮುಸ್ಲಿಮರು ವ್ಯಾಪಾರ ಮಳಿಗೆ ಹಾಕದಂತೆ ಅವಕಾಶ ನಿರಾಕರಿಸಲಾಗಿತ್ತು. ಈ ಸಲವೂ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಆಡಳಿತ ಮಂಡಳಿ ನಿರ್ಧರಿಸಿದೆ.
ಕರಾವಳಿಯಲ್ಲಿ ಮತ ಸಾಮರಸ್ಯದ ನೆಲೆಯೆಂದು ಖ್ಯಾತಿ ಪಡೆದಿದ್ದ ಬಪ್ಪನಾಡಿನಲ್ಲಿ ಈ ರೀತಿಯ ಬೆಳವಣಿಗೆ ಆಗಿರುವುದು ಚುನಾವಣೆ ಹೊತ್ತಲ್ಲಿ ಮತ್ತೆ ಚರ್ಚೆಗೀಡಾಗಿದೆ.
Mangalore Muslim traders banned from fairs at Bappanadu Sri Durga Parameshwari Temple in Mulki
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm