ಬ್ರೇಕಿಂಗ್ ನ್ಯೂಸ್
08-04-23 08:03 pm Mangaluru correspondent ಕರಾವಳಿ
ಕುಂದಾಪುರ, ಎ.8: ಬೈಂದೂರು ಸಮೀಪದ ಕೋಸಳ್ಳಿ ಫಾಲ್ಸ್ ನಲ್ಲಿ ಶುಕ್ರವಾರ ಸಂಜೆ ಗೆಳೆಯರ ಜೊತೆಗೆ ಈಜಲು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಶನಿವಾರ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎಎಸ್ಐ ಕುಮಾರ ಶೆಟ್ಟಿ ಎಂಬವರ ಮಗ ಚಿರಾಂತ್ ಶೆಟ್ಟಿ (20) ಎಂದು ತಿಳಿದುಬಂದಿದೆ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಪದವಿ ಕಲಿಯುತ್ತಿದ್ದ.
ಚಿರಾಂತ್ ತನ್ನ ಗೆಳಯರೊಂದಿಗೆ ಶುಕ್ರವಾರ ಸಂಜೆ ಕೋಸಳ್ಳಿ ಫಾಲ್ಸ್ ಬಳಿಗೆ ಬಂದಿದ್ದರು. ಈ ವೇಳೆ ಚಿರಾಂತ್ ತನಗೆ ಈಜಲು ಬರುವುದೆಂದು ನೀರಿಗಿಳಿದಿದ್ದ. ಆದರೆ ನೀರಿಗಿಳಿದ ಚಿರಾಂತ್ ಕೆಳ ಹೊತ್ತಿನಲ್ಲೇ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆ ನಡೆದ ಸ್ಥಳದಲ್ಲಿ ಶುಕ್ರವಾರ ಸಂಜೆಯೇ ಅಗ್ನಿಶಾಮಕದಳದ ಸಿಬ್ಬಂದಿ, ಸ್ಥಳೀಯರು ರಾತ್ರಿಯ ತನಕ ಹುಡುಕಾಟ ನಡೆಸಿದ್ದಾರೆ. ಶನಿವಾರ ಮತ್ತೆ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಕ್ರವಾರ ಗುಡ್ ಫ್ರೈಡೇ ಸಲುವಾಗಿ ಕಾಲೇಜಿಗೆ ರಜೆ ಇದ್ದುದರಿಂದ ಚಿರಾಂತ್ ತನ್ನ ಗೆಳೆಯರಾದ ಬೈಂದೂರು ಮೂಲದ ಕೀರ್ತನ್ ದೇವಾಡಿಗ ಮತ್ತು ಅಕ್ಷಯ್ ಆಚಾರ್ ಅವರ ಮನೆಗೆ ತೆರಳಿದ್ದರು. ಇತರ ಗೆಳೆಯರೂ ಸೇರಿಕೊಂಡು ಶುಕ್ರವಾರ ಅಪರಾಹ್ನ 3.30ರ ಸುಮಾರಿಗೆ ಫಾಲ್ಸ್ ಬಳಿಗೆ ತೆರಳಿದ್ದರು. ಈ ವೇಳೆ, ಚಿರಾಂತ್ ಮಾತ್ರ ನೀರಿಗೆ ಇಳಿದಿದ್ದರು ಎನ್ನಲಾಗಿದೆ.
The body of the student who was drowned while swimming at Koosalli Falls on Friday evening were found on Saturday April 8. The deceased is identified as Chiranth Shetty (20), son of ASI Kumara Shetty, a resident of Koppa taluk of Chikkamagaluru district. He was studying in second B Com with an aviation course at a private college in Mangaluru.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm