ಬ್ರೇಕಿಂಗ್ ನ್ಯೂಸ್
08-04-23 08:03 pm Mangaluru correspondent ಕರಾವಳಿ
ಕುಂದಾಪುರ, ಎ.8: ಬೈಂದೂರು ಸಮೀಪದ ಕೋಸಳ್ಳಿ ಫಾಲ್ಸ್ ನಲ್ಲಿ ಶುಕ್ರವಾರ ಸಂಜೆ ಗೆಳೆಯರ ಜೊತೆಗೆ ಈಜಲು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಶನಿವಾರ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎಎಸ್ಐ ಕುಮಾರ ಶೆಟ್ಟಿ ಎಂಬವರ ಮಗ ಚಿರಾಂತ್ ಶೆಟ್ಟಿ (20) ಎಂದು ತಿಳಿದುಬಂದಿದೆ. ಈತ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಕಾಂ ಪದವಿ ಕಲಿಯುತ್ತಿದ್ದ.
ಚಿರಾಂತ್ ತನ್ನ ಗೆಳಯರೊಂದಿಗೆ ಶುಕ್ರವಾರ ಸಂಜೆ ಕೋಸಳ್ಳಿ ಫಾಲ್ಸ್ ಬಳಿಗೆ ಬಂದಿದ್ದರು. ಈ ವೇಳೆ ಚಿರಾಂತ್ ತನಗೆ ಈಜಲು ಬರುವುದೆಂದು ನೀರಿಗಿಳಿದಿದ್ದ. ಆದರೆ ನೀರಿಗಿಳಿದ ಚಿರಾಂತ್ ಕೆಳ ಹೊತ್ತಿನಲ್ಲೇ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆ ನಡೆದ ಸ್ಥಳದಲ್ಲಿ ಶುಕ್ರವಾರ ಸಂಜೆಯೇ ಅಗ್ನಿಶಾಮಕದಳದ ಸಿಬ್ಬಂದಿ, ಸ್ಥಳೀಯರು ರಾತ್ರಿಯ ತನಕ ಹುಡುಕಾಟ ನಡೆಸಿದ್ದಾರೆ. ಶನಿವಾರ ಮತ್ತೆ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಕ್ರವಾರ ಗುಡ್ ಫ್ರೈಡೇ ಸಲುವಾಗಿ ಕಾಲೇಜಿಗೆ ರಜೆ ಇದ್ದುದರಿಂದ ಚಿರಾಂತ್ ತನ್ನ ಗೆಳೆಯರಾದ ಬೈಂದೂರು ಮೂಲದ ಕೀರ್ತನ್ ದೇವಾಡಿಗ ಮತ್ತು ಅಕ್ಷಯ್ ಆಚಾರ್ ಅವರ ಮನೆಗೆ ತೆರಳಿದ್ದರು. ಇತರ ಗೆಳೆಯರೂ ಸೇರಿಕೊಂಡು ಶುಕ್ರವಾರ ಅಪರಾಹ್ನ 3.30ರ ಸುಮಾರಿಗೆ ಫಾಲ್ಸ್ ಬಳಿಗೆ ತೆರಳಿದ್ದರು. ಈ ವೇಳೆ, ಚಿರಾಂತ್ ಮಾತ್ರ ನೀರಿಗೆ ಇಳಿದಿದ್ದರು ಎನ್ನಲಾಗಿದೆ.
The body of the student who was drowned while swimming at Koosalli Falls on Friday evening were found on Saturday April 8. The deceased is identified as Chiranth Shetty (20), son of ASI Kumara Shetty, a resident of Koppa taluk of Chikkamagaluru district. He was studying in second B Com with an aviation course at a private college in Mangaluru.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm