ಬಂಟ್ವಾಳ ; ಶಾಲೆ ಬಿಟ್ಟು ಅಜ್ಜಿ ಮನೆಗೆ ತೆರಳಿದ್ದ 8ನೇ ತರಗತಿ ಬಾಲಕ ಕೆರೆಗೆ ಬಿದ್ದು ಸಂಶಯಾಸ್ಪದ ಸಾವು

09-04-23 05:23 pm       Mangaluru Corresondent   ಕರಾವಳಿ

ಶಾಲೆಯಿಂದ ನೇರವಾಗಿ ಅಜ್ಜಿ ಮನೆಗೆ ಬಂದು ದಿಢೀರ್ ನಾಪತ್ತೆಯಾಗಿದ್ದ ಬಾಲಕ ಮನೆ ಬಳಿಯಲ್ಲೇ ಇರುವ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಮಿತ್ತಬೈಲಿನ ಕಳ್ಳಿಗೆ ಗ್ರಾಮದಲ್ಲಿ ನಡೆದಿದೆ‌.

ಬಂಟ್ವಾಳ, ಎ.9: ಶಾಲೆಯಿಂದ ನೇರವಾಗಿ ಅಜ್ಜಿ ಮನೆಗೆ ಬಂದು ದಿಢೀರ್ ನಾಪತ್ತೆಯಾಗಿದ್ದ ಬಾಲಕ ಮನೆ ಬಳಿಯಲ್ಲೇ ಇರುವ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಮಿತ್ತಬೈಲಿನ ಕಳ್ಳಿಗೆ ಗ್ರಾಮದಲ್ಲಿ ನಡೆದಿದೆ‌.

ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಅಝೀಂ (13) ಮೃತ ಬಾಲಕ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರನಾಗಿದ್ದು ಶನಿವಾರ ಶಾಲೆ ಬಿಟ್ಟು ಅಜ್ಜಿ ಮನೆಗೆ ತೆರಳಿದ್ದ.

ಶನಿವಾರ ಮಧ್ಯಾಹ್ನ ಶಾಲೆ ಮುಗಿದ ಬಳಿಕ ಪಾಣೆಮಂಗಳೂರಿನ ಅಜ್ಜಿ ಮನೆಗೆ ಬಂದಿದ್ದ. ಅಲ್ಲಿ ಬಾಲಕ ತನ್ನ ಸ್ನೇಹಿತರೊಂದಿಗೆ ಇರುವುದನ್ನು ಸ್ಥಳೀಯರು ಗಮನಿಸಿದ್ದರು. ಆದರೆ ಮಧ್ಯಾಹ್ನದ ಬಳಿಕ ಬಾಲಕ ಕಾಣೆಯಾಗಿದ್ದ. ಬಾಲಕನ ಕೈಯಲ್ಲಿದ್ದ ಮೊಬೈಲ್ ಗೆ ಪೋಷಕರು ಕರೆ ಮಾಡಿದಾಗ, ಮೊಬೈಲ್ ರಿಂಗ್ ಆಗುತ್ತಿತ್ತು ವಿನಾ ಬಾಲಕ ಕರೆ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಆತಂಕಗೊಂಡ ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ಪಾಣೆಮಂಗಳೂರಿ‌ನ ಕಳ್ಳಿಗೆ ಗ್ರಾಮದ ಕೆರೆಯ ಬಳಿ ತೋರಿಸಿತ್ತು. ಅಲ್ಲಿ ನೋಡಿದರೆ ಕೆರೆಯ ಸಮೀಪ ಬಾಲಕನ ವಸ್ತ್ರ, ಪಾದರಕ್ಷೆ ಹಾಗೂ ಮೊಬೈಲ್ ಪತ್ತೆಯಾಗಿದೆ. ಸಂಶಯದಿಂದ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ಪತ್ತೆಯಾಗಿದೆ. ಘಟನೆ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾನೆಯೇ, ಈಜಲು ಇಳಿದಿದ್ದನೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ‌

The dead body of a schoolboy, who had gone missing on Saturday afternoon, was found in a lake in Kuppila, Kakhile village, on Saturday night. The deceased has been identified as Azim (13), a class 8 student of a private English medium school in Mittabailu near BC Road. He was the son of Abdul Razak, a local resident.