ಬ್ರೇಕಿಂಗ್ ನ್ಯೂಸ್
09-04-23 05:23 pm Mangaluru Corresondent ಕರಾವಳಿ
ಬಂಟ್ವಾಳ, ಎ.9: ಶಾಲೆಯಿಂದ ನೇರವಾಗಿ ಅಜ್ಜಿ ಮನೆಗೆ ಬಂದು ದಿಢೀರ್ ನಾಪತ್ತೆಯಾಗಿದ್ದ ಬಾಲಕ ಮನೆ ಬಳಿಯಲ್ಲೇ ಇರುವ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಮಿತ್ತಬೈಲಿನ ಕಳ್ಳಿಗೆ ಗ್ರಾಮದಲ್ಲಿ ನಡೆದಿದೆ.
ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಅಝೀಂ (13) ಮೃತ ಬಾಲಕ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರನಾಗಿದ್ದು ಶನಿವಾರ ಶಾಲೆ ಬಿಟ್ಟು ಅಜ್ಜಿ ಮನೆಗೆ ತೆರಳಿದ್ದ.
ಶನಿವಾರ ಮಧ್ಯಾಹ್ನ ಶಾಲೆ ಮುಗಿದ ಬಳಿಕ ಪಾಣೆಮಂಗಳೂರಿನ ಅಜ್ಜಿ ಮನೆಗೆ ಬಂದಿದ್ದ. ಅಲ್ಲಿ ಬಾಲಕ ತನ್ನ ಸ್ನೇಹಿತರೊಂದಿಗೆ ಇರುವುದನ್ನು ಸ್ಥಳೀಯರು ಗಮನಿಸಿದ್ದರು. ಆದರೆ ಮಧ್ಯಾಹ್ನದ ಬಳಿಕ ಬಾಲಕ ಕಾಣೆಯಾಗಿದ್ದ. ಬಾಲಕನ ಕೈಯಲ್ಲಿದ್ದ ಮೊಬೈಲ್ ಗೆ ಪೋಷಕರು ಕರೆ ಮಾಡಿದಾಗ, ಮೊಬೈಲ್ ರಿಂಗ್ ಆಗುತ್ತಿತ್ತು ವಿನಾ ಬಾಲಕ ಕರೆ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಆತಂಕಗೊಂಡ ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ಪಾಣೆಮಂಗಳೂರಿನ ಕಳ್ಳಿಗೆ ಗ್ರಾಮದ ಕೆರೆಯ ಬಳಿ ತೋರಿಸಿತ್ತು. ಅಲ್ಲಿ ನೋಡಿದರೆ ಕೆರೆಯ ಸಮೀಪ ಬಾಲಕನ ವಸ್ತ್ರ, ಪಾದರಕ್ಷೆ ಹಾಗೂ ಮೊಬೈಲ್ ಪತ್ತೆಯಾಗಿದೆ. ಸಂಶಯದಿಂದ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ಪತ್ತೆಯಾಗಿದೆ. ಘಟನೆ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದಾನೆಯೇ, ಈಜಲು ಇಳಿದಿದ್ದನೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The dead body of a schoolboy, who had gone missing on Saturday afternoon, was found in a lake in Kuppila, Kakhile village, on Saturday night. The deceased has been identified as Azim (13), a class 8 student of a private English medium school in Mittabailu near BC Road. He was the son of Abdul Razak, a local resident.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am