ಬ್ರೇಕಿಂಗ್ ನ್ಯೂಸ್
10-04-23 08:50 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.10 : ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ನೂರು ಅಡಿ ಆಳ ಇರುವ ಪ್ರಪಾತಕ್ಕೆ ಉರುಳಿ ಬಿದ್ದಿದ್ದು ತೀವ್ರ ಗಾಯಗೊಂಡಿದ್ದ ವೃದ್ಧ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪ ಎಂಬಲ್ಲಿ ಸಂಬಂಧಿಕರ ಅಂತ್ಯಕ್ರಿಯೆಗೆ ಹೋಗಿ ಭಾನುವಾರ ಮರಳುತ್ತಿದ್ದ ವೇಳೆ ಅವಘಡ ನಡೆದಿತ್ತು. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ(64) ಎಂಬ ಮಹಿಳೆ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ(64), ಪುತ್ರಿ ಪೂರ್ಣಿಮಾ ಶೆಟ್ಟಿ(42), ಮೊಮ್ಮಕ್ಕಳಾದ ಸಮೃದ್ಧ್(10) ಸಾಕ್ಷಿ(14), ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ(64) ಹಾಗೂ ಕಾರು ಚಾಲಕರಾಗಿದ್ದ ಅರುಣಾಕರ ಗೌಡ ಗಾಯಗೊಂಡಿದ್ದರು.
ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆಯ ಶ್ರೀಕೃಷ್ಣ ಆಸ್ಪತ್ರೆ, ಉಜಿರೆಯ ಎಸ್ಡಿಎಂ ಆಸ್ಪತ್ರೆ ಮತ್ತು ಬೆನಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಈ ಪೈಕಿ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರೋಜಿನಿ ಶೆಟ್ಟಿ (64) ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪುಷ್ಪಾವತಿ ಶೆಟ್ಟಿ ಕಾರಿನ ಚಾಲಕ ಅರುಣಾಕರ ಗೌಡ ವಿರುದ್ಧ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ನಡೆದಿದೆ ಎಂದು ದೂರು ನೀಡಿದ್ದಾರೆ.
In a tragic incident, a car traveling from Kottigehara towards Ujire lost control near the second turn of Charmadi Ghat road and rolled off 100 meters into a gorge on Sunday night. A woman was killed and several others have been injured in the road mishap.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am