ಬ್ರೇಕಿಂಗ್ ನ್ಯೂಸ್
10-04-23 08:50 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.10 : ಚಾರ್ಮಾಡಿ ಘಾಟಿಯ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ನೂರು ಅಡಿ ಆಳ ಇರುವ ಪ್ರಪಾತಕ್ಕೆ ಉರುಳಿ ಬಿದ್ದಿದ್ದು ತೀವ್ರ ಗಾಯಗೊಂಡಿದ್ದ ವೃದ್ಧ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಶೃಂಗೇರಿಯ ಕೊಪ್ಪ ಎಂಬಲ್ಲಿ ಸಂಬಂಧಿಕರ ಅಂತ್ಯಕ್ರಿಯೆಗೆ ಹೋಗಿ ಭಾನುವಾರ ಮರಳುತ್ತಿದ್ದ ವೇಳೆ ಅವಘಡ ನಡೆದಿತ್ತು. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ(64) ಎಂಬ ಮಹಿಳೆ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ(64), ಪುತ್ರಿ ಪೂರ್ಣಿಮಾ ಶೆಟ್ಟಿ(42), ಮೊಮ್ಮಕ್ಕಳಾದ ಸಮೃದ್ಧ್(10) ಸಾಕ್ಷಿ(14), ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ(64) ಹಾಗೂ ಕಾರು ಚಾಲಕರಾಗಿದ್ದ ಅರುಣಾಕರ ಗೌಡ ಗಾಯಗೊಂಡಿದ್ದರು.
ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆಯ ಶ್ರೀಕೃಷ್ಣ ಆಸ್ಪತ್ರೆ, ಉಜಿರೆಯ ಎಸ್ಡಿಎಂ ಆಸ್ಪತ್ರೆ ಮತ್ತು ಬೆನಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು. ಈ ಪೈಕಿ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸರೋಜಿನಿ ಶೆಟ್ಟಿ (64) ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪುಷ್ಪಾವತಿ ಶೆಟ್ಟಿ ಕಾರಿನ ಚಾಲಕ ಅರುಣಾಕರ ಗೌಡ ವಿರುದ್ಧ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ನಡೆದಿದೆ ಎಂದು ದೂರು ನೀಡಿದ್ದಾರೆ.
In a tragic incident, a car traveling from Kottigehara towards Ujire lost control near the second turn of Charmadi Ghat road and rolled off 100 meters into a gorge on Sunday night. A woman was killed and several others have been injured in the road mishap.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm