ಬ್ರೇಕಿಂಗ್ ನ್ಯೂಸ್
10-04-23 09:47 pm Mangalore Correspondent ಕರಾವಳಿ
ಸುಳ್ಯ, ಎ.10: ಸುಳ್ಯ ಕ್ಷೇತ್ರದ ಆರು ಬಾರಿಯ ಬಿಜೆಪಿ ಶಾಸಕ ಎಸ್.ಅಂಗಾರ ಅವರನ್ನು ಈ ಬಾರಿ ಬದಲಿಸಬೇಕು ಎನ್ನುವ ಆಗ್ರಹ ಕ್ಷೇತ್ರದಲ್ಲಿ ಕೇಳಿಬರುತ್ತಿದೆ. ಇದೀಗ ಅಂಗಾರ ಅವರ ಹುಟ್ಟೂರಿನಲ್ಲೇ ಮತದಾನದ ಬಹಿಷ್ಕಾರದ ಬ್ಯಾನರ್ ಕಂಡುಬಂದಿದೆ. ಅರಂತೋಡು ಗ್ರಾಮದ ಅರಮನೆಗಯ ಮತ್ತಿತರ ಆಸುಪಾಸಿನ ಪರಿಶಿಷ್ಟ ಜಾತಿಯ ಕೇರಿಗಳಲ್ಲೇ ಮತದಾನ ಬಹಿಷ್ಕರಿಸುವುದಾಗಿ ಹೇಳಿ ಮನೆ ಮನೆಗಳಲ್ಲಿ ಬ್ಯಾನರ್, ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ.
ಅರಮನೆಗಯ ಅನ್ನುವ ಪ್ರದೇಶ ಅಂಗಾರ ಅವರ ಸ್ವಂತ ಊರು. ಆದರೆ, ಈ ಊರಿನಲ್ಲೇ ನಡುವೆ ಹರಿಯುವ ಹೊಳೆಗೆ ಸೇತುವೆ ಇಲ್ಲ. ಅಲ್ಲೊಂದು ಸೇತುವೆ ಆಗಬೇಕೆಂದು ಪರಿಸರದ ನಿವಾಸಿಗಳು 30 ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತ ಬಂದಿದ್ದಾರೆ. ಆದರೂ ಕ್ಷೇತ್ರದ ನಾಯಕರು ಎನಿಸಿಕೊಂಡವರು ಜನರಿಗೆ ಭರವಸೆ ನೀಡಿದ್ದು ಬಿಟ್ಟರೆ, ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಆಸುಪಾಸಿನ ಜನರು ಪ್ರತಿ ವರ್ಷ ಮಳೆಗಾಲದಲ್ಲಿ ಸಂಕಷ್ಟ ಅನುಭವಿಸುತ್ತಾರೆ. ಇಲ್ಲಿಂದ ಅರಂತೋಡು ಪೇಟೆಗೆ ಸಾಗಲು 5 ಕಿಮೀ ಸುತ್ತು ಬಳಸಿ ಹೋಗಬೇಕು. ಹೊಳೆಯನ್ನು ದಾಟಲಾಗದೇ ಜನರು, ಶಾಲೆಗೆ ಹೋಗುವ ಮಕ್ಕಳು ಪರಿತಪಿಸುವ ಸ್ಥಿತಿ ಇದೆ.




ಹೊಳೆಗೆ ಅಡ್ಡಲಾಗಿ ತಾತ್ಕಾಲಿಕವಾಗಿ ಅಲ್ಲಿನ ಜನರೇ ಮಾಡಿಕೊಂಡಿರುವ ಅಡಿಕೆ ಮರದ ಸಲಾಕೆಯ ಸೇತುವೆಯಲ್ಲಿ ಜನರು ನೇತಾಡಿಕೊಂಡು ಹೋಗುವುದು, ರಭಸಕ್ಕೆ ಹರಿವ ನೀರಿನ ಮೇಲಿನಿಂದ ಸರ್ಕಸ್ ಮಾಡೋದು ಮಾಮೂಲಿ ಅನ್ನುವಂತಾಗಿದೆ. ಇದೀಗ ಚುನಾವಣೆ ಸಂದರ್ಭದಲ್ಲಿಯೇ ಕ್ಷೇತ್ರದ ಆರು ಬಾರಿಯ ಶಾಸಕ ಎಸ್. ಅಂಗಾರ ಅವರ ಕಿವಿಗೆ ಅಪ್ಪಳಿಸುವ ರೀತಿ ಮನೆ ಮನೆಯಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದಾರೆ. ಬೇಡಿಕೆ ಈಡೇರದ ಕಾರಣ ಬೇಸತ್ತ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ. ಅರಮನೆಗಯದ ಸೇತುವೆ ಬೇಡಿಕೆ ಈಡೇರುವ ತನಕ ಮುಂದಿನೆಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ ಎಂದು ಭಿತ್ತಿಪತ್ರದಲ್ಲಿ ಬರೆದು ಮನೆಯ ಮುಂದೆ ಅಂಟಿಸಿದ್ದಾರೆ. ಚುನಾವಣೆ ವೇಳೆ ಮತ ಕೇಳಲು ಬರುವ ರಾಜಕೀಯ ಪಕ್ಷಗಳ ಕಾರ್ಯಕರ್ತರನ್ನು ಈ ರೀತಿಯ ಪತ್ರಗಳು ಅಣಕಿಸಲಿವೆ. ಇದೇ ವೇಳೆಗೆ, ಮತದಾನಕ್ಕೆ ಪ್ರೇರಣೆ ನೀಡುತ್ತಿರುವ ಜಿಲ್ಲಾ ಮಟ್ಟದ ಅಧಿಕಾರಿಗಳು ಇಲ್ಲಿನ ನಿವಾಸಿಗಳನ್ನು ಹೇಗೆ ಮನವರಿಕೆ ಮಾಡುತ್ತಾರೆ ಅನ್ನುವುದು ಕುತೂಹಲ ಮೂಡಿದೆ.
The residents of Aramanegaya and surrounding villages have decided to boycott the upcoming legislative assembly elections due to the lack of a bridge to cross the rivulet in Aranthodu village, Sullia Taluk. The village, which is represented by six-time MLA and minister S Angara, has been demanding a bridge for over 30 years.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm