ಬ್ರೇಕಿಂಗ್ ನ್ಯೂಸ್
12-04-23 04:39 pm Mangaluru Correspondent ಕರಾವಳಿ
ಉಳ್ಳಾಲ, ಎ.12: ಆಕಸ್ಮಿಕ ಬೆಂಕಿ ಅನಾಹುತದಿಂದ ನಾಡದೋಣಿ ಮೀನುಗಾರರ ಬಲೆಗಳು ಸುಟ್ಟು ಕರಕಲಾದ ಘಟನೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದ್ದು 15 ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.
ಬುಧವಾರ ಮಧ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ ದೋಣಿಗಳ ಶೆಡ್ ಹತ್ತಿರ ಇರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಬಲೆಗೆ ಬೆಂಕಿ ತಗುಲಿದ್ದು ಬಲೆಗಳು ಸುಟ್ಟು ಕರಕಲಾಗಿವೆ. ಬಿಸಿಲಿನ ಜಳದಿಂದ ಬೆಂಕಿ ಹತ್ತಿಕೊಂಡಿದೆಯಾ ಅಥವಾ ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿದೆಯಾ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಾಡದೋಣಿ ಮೀನುಗಾರರಾದ ಹೇಮಂತ್ ಉಚ್ಚಿಲ, ಸಂತೋಷ್ ಉಚ್ಚಿಲ, ಸಾಧನ ಉಚ್ಚಿಲ, ಶೇಖರ್ ಸೋಮೇಶ್ವರ, ಯೋಗೀಶ್ ಸೋಮೇಶ್ವರ ಅವರ ಮೀನಿನ ಬಲೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಕಳೆದ ಮಾರ್ಚ್ ತಿಂಗಳಲ್ಲೂ ಇದೇ ಪ್ರದೇಶದಲ್ಲಿ ಎರಡು ನಾಡ ದೋಣಿ ಮತ್ತು ಅದರಲ್ಲಿದ್ದ ಮೀನಿನ ಬಲೆಗಳು ಬೆಂಕಿ ಆಕಸ್ಮಿಕದಿಂದ ಸುಟ್ಟು ಕರಕಲಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು. ಸ್ಥಳಕ್ಕೆ ಬಿಜೆಪಿ ಮುಖಂಡರಾದ ಸತೀಶ್ ಕುಂಪಲ ಭೇಟಿ ನೀಡಿ ಬಡ ಮೀನುಗಾರರಿಗೆ ಶೀಘ್ರವೇ ಸೂಕ್ತ ಪರಿಹಾರ ತೆಗೆಸಿ ಕೊಡುವಂತೆ ಅಧಿಕಾರಿಗಳಲ್ಲಿ ಆಗ್ರಹಿಸಿದ್ದಾರೆ
Mangalore Sudden Fire at Someshwar in Rudrapaade, 15 lakh worth fishing nets destroyed.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm