ಬ್ರೇಕಿಂಗ್ ನ್ಯೂಸ್
12-04-23 08:22 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.12 : ಟಿಕೆಟ್ ವಂಚಿತರೆಲ್ಲರ ಜೊತೆ ಮಾತನಾಡಿದ್ದೇನೆ. ಅವರನ್ನು ಶಾಸಕರಾಗಿ ಮಾಡಿರೋದು ಕೂಡ ಪಕ್ಷವೇ. ಪಕ್ಷ ಅವರನ್ನು ಗೌರವಪೂರ್ವಕ ನಡೆಸಿಕೊಂಡಿದೆ. ನಡೆಸಿಕೊಳ್ಳುತ್ತದೆ. ಅಸಮಾಧಾನ ಇದ್ದವರ ಜೊತೆಗೆ ಮಾತನಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿಯಿತ್ತು ದೇವರ ದರ್ಶನ ಪಡೆದ ಸಿಎಂ ಬೊಮ್ಮಾಯಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ, ಕಟೀಲು, ಸೋಮೇಶ್ವರ ದೇವಸ್ಥಾನ ಭೇಟಿ ನೀಡಲಿದ್ದೇನೆ. ಪ್ರತಿ ಚುನಾವಣೆಗೆ ಮುಂಚೆ ಭೇಟಿ ಕೊಡುತ್ತಿದ್ದೆ. ಈ ಬಾರಿಯೂ ಭೇಟಿ ನೀಡಿದ್ದೇನೆ. ಕನ್ನಡ ನಾಡಿನ ಸುಭಿಕ್ಷೆಗಾಗಿ, ಸತ್ಯಕ್ಕೆ ಜಯ ಸಿಗುವಂತೆ ಪ್ರಾರ್ಥನೆ ಮಾಡಿದ್ದೇನೆ ಎಂದರು.
ಟಿಕೆಟ್ ವಂಚಿತರು ರಾಜಕೀಯ ಭವಿಷ್ಯ ಮಸುಕಾಯ್ತು ಅಂತ ಅನ್ಕೊಳ್ಳುವುದು ಬೇಡ. ಅವರ ಭವಿಷ್ಯವೂ ಸುರಕ್ಷಿತವಾಗಿ ಇರಲಿದೆ. ಟಿಕೆಟ್ ಸಿಗದಾಗ ಸಹಜವಾಗಿ ಅಸಮಾಧಾನ ಆಗುತ್ತದೆ ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಸವದಿಯವರ ರಾಜಿನಾಮೆ ಪ್ರಸ್ತಾಪ ವಿಚಾರ ಕೇಳಿದ್ದಕ್ಕೆ, ಬೇಸರದಿಂದ ಆ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಸವದಿ ಅವರಿಗೆ ಪಕ್ಷದ ಜೊತೆ ಸಂಬಂಧ ಇದೆ. ನನ್ನ ಜೊತೆಗೂ ಬಹಳ ಹತ್ತಿರದ ಸಂಬಂಧ ಇದೆ. ಅವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ. ನಾಳೆ, ನಾಡಿದ್ದರಲ್ಲಿ ಬಿಜೆಪಿ ಎರಡನೇ ಪಟ್ಟಿಯೂ ಬಿಡುಗಡೆಯಾಗಲಿದೆ ಎಂದರು.
ವಿನಯ ಕುಲಕರ್ಣಿ ನಿಮ್ಮ ಎದುರಾಳಿಯಾಗಿ ಸ್ಪರ್ಧಿಸುತ್ತಾರೆಂಬ ಪ್ರಶ್ನೆಗೆ, ಬಿಜೆಪಿ ಯಾರನ್ನೂ ಟಾರ್ಗೆಟ್ ಮಾಡಿಲ್ಲ. ನನ್ನ ಎದುರಾಳಿ ಯಾರೆಂಬುವುದು ನನಗೆ ಮುಖ್ಯ ಅಲ್ಲ. ನನಗೆ ನನ್ನ ಕ್ಷೇತ್ರದ ಜನ ಮುಖ್ಯ. ಯಾರೇ ಆದರೂ ಎದುರಿಸುತ್ತೇನೆ. ಜನರು ನನಗೆ ಮತ ನೀಡಲಿದ್ದಾರೆ ಎಂದರು.
ಹಲವು ಟಿಕೆಟ್ ವಂಚಿತರು ರಾಜಕೀಯ ನಿವೃತ್ತಿ ಹೇಳಿಕೆ ನೀಡಿರುವ ಕುರಿತ ಪ್ರಶ್ನೆಗೆ, ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗೋದಾಗಿ ಹೇಳಿದ್ದಾರೆ. ಪೂರ್ತಿ ರಾಜಕೀಯದಿಂದ ನಿವೃತ್ತಿಯಾಗೋದಾಗಿ ಹೇಳಿಲ್ಲ. ಈಶ್ವರಪ್ಪ ಜೊತೆ ವರಿಷ್ಠರು ಮಾತನಾಡುತ್ತಾರೆ. ಇನ್ನು ಸುಳ್ಯದ ಅಂಗಾರ ಜಂಟಲ್ಮ್ಯಾನ್. ಅವರ ಜೊತೆಗೂ ಮಾತನಾಡುತ್ತೇನೆ ಎಂದು ಹೇಳಿದರು.
#Mangalore #CMBommai visits #Dharmasthala temple, says will talk to disappointed #MLAs who are resigning pic.twitter.com/HCMMJvfU9u
— Headline Karnataka (@hknewsonline) April 12, 2023
Mangalore CM Basavaraj Bommai visits Dharmasthala, says will talk to disappointed MLAs who are resigning.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm