ಬ್ರೇಕಿಂಗ್ ನ್ಯೂಸ್
12-04-23 08:22 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.12 : ಟಿಕೆಟ್ ವಂಚಿತರೆಲ್ಲರ ಜೊತೆ ಮಾತನಾಡಿದ್ದೇನೆ. ಅವರನ್ನು ಶಾಸಕರಾಗಿ ಮಾಡಿರೋದು ಕೂಡ ಪಕ್ಷವೇ. ಪಕ್ಷ ಅವರನ್ನು ಗೌರವಪೂರ್ವಕ ನಡೆಸಿಕೊಂಡಿದೆ. ನಡೆಸಿಕೊಳ್ಳುತ್ತದೆ. ಅಸಮಾಧಾನ ಇದ್ದವರ ಜೊತೆಗೆ ಮಾತನಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿಯಿತ್ತು ದೇವರ ದರ್ಶನ ಪಡೆದ ಸಿಎಂ ಬೊಮ್ಮಾಯಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ, ಕಟೀಲು, ಸೋಮೇಶ್ವರ ದೇವಸ್ಥಾನ ಭೇಟಿ ನೀಡಲಿದ್ದೇನೆ. ಪ್ರತಿ ಚುನಾವಣೆಗೆ ಮುಂಚೆ ಭೇಟಿ ಕೊಡುತ್ತಿದ್ದೆ. ಈ ಬಾರಿಯೂ ಭೇಟಿ ನೀಡಿದ್ದೇನೆ. ಕನ್ನಡ ನಾಡಿನ ಸುಭಿಕ್ಷೆಗಾಗಿ, ಸತ್ಯಕ್ಕೆ ಜಯ ಸಿಗುವಂತೆ ಪ್ರಾರ್ಥನೆ ಮಾಡಿದ್ದೇನೆ ಎಂದರು.
ಟಿಕೆಟ್ ವಂಚಿತರು ರಾಜಕೀಯ ಭವಿಷ್ಯ ಮಸುಕಾಯ್ತು ಅಂತ ಅನ್ಕೊಳ್ಳುವುದು ಬೇಡ. ಅವರ ಭವಿಷ್ಯವೂ ಸುರಕ್ಷಿತವಾಗಿ ಇರಲಿದೆ. ಟಿಕೆಟ್ ಸಿಗದಾಗ ಸಹಜವಾಗಿ ಅಸಮಾಧಾನ ಆಗುತ್ತದೆ ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಸವದಿಯವರ ರಾಜಿನಾಮೆ ಪ್ರಸ್ತಾಪ ವಿಚಾರ ಕೇಳಿದ್ದಕ್ಕೆ, ಬೇಸರದಿಂದ ಆ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಸವದಿ ಅವರಿಗೆ ಪಕ್ಷದ ಜೊತೆ ಸಂಬಂಧ ಇದೆ. ನನ್ನ ಜೊತೆಗೂ ಬಹಳ ಹತ್ತಿರದ ಸಂಬಂಧ ಇದೆ. ಅವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ. ನಾಳೆ, ನಾಡಿದ್ದರಲ್ಲಿ ಬಿಜೆಪಿ ಎರಡನೇ ಪಟ್ಟಿಯೂ ಬಿಡುಗಡೆಯಾಗಲಿದೆ ಎಂದರು.
ವಿನಯ ಕುಲಕರ್ಣಿ ನಿಮ್ಮ ಎದುರಾಳಿಯಾಗಿ ಸ್ಪರ್ಧಿಸುತ್ತಾರೆಂಬ ಪ್ರಶ್ನೆಗೆ, ಬಿಜೆಪಿ ಯಾರನ್ನೂ ಟಾರ್ಗೆಟ್ ಮಾಡಿಲ್ಲ. ನನ್ನ ಎದುರಾಳಿ ಯಾರೆಂಬುವುದು ನನಗೆ ಮುಖ್ಯ ಅಲ್ಲ. ನನಗೆ ನನ್ನ ಕ್ಷೇತ್ರದ ಜನ ಮುಖ್ಯ. ಯಾರೇ ಆದರೂ ಎದುರಿಸುತ್ತೇನೆ. ಜನರು ನನಗೆ ಮತ ನೀಡಲಿದ್ದಾರೆ ಎಂದರು.
ಹಲವು ಟಿಕೆಟ್ ವಂಚಿತರು ರಾಜಕೀಯ ನಿವೃತ್ತಿ ಹೇಳಿಕೆ ನೀಡಿರುವ ಕುರಿತ ಪ್ರಶ್ನೆಗೆ, ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗೋದಾಗಿ ಹೇಳಿದ್ದಾರೆ. ಪೂರ್ತಿ ರಾಜಕೀಯದಿಂದ ನಿವೃತ್ತಿಯಾಗೋದಾಗಿ ಹೇಳಿಲ್ಲ. ಈಶ್ವರಪ್ಪ ಜೊತೆ ವರಿಷ್ಠರು ಮಾತನಾಡುತ್ತಾರೆ. ಇನ್ನು ಸುಳ್ಯದ ಅಂಗಾರ ಜಂಟಲ್ಮ್ಯಾನ್. ಅವರ ಜೊತೆಗೂ ಮಾತನಾಡುತ್ತೇನೆ ಎಂದು ಹೇಳಿದರು.
#Mangalore #CMBommai visits #Dharmasthala temple, says will talk to disappointed #MLAs who are resigning pic.twitter.com/HCMMJvfU9u
— Headline Karnataka (@hknewsonline) April 12, 2023
Mangalore CM Basavaraj Bommai visits Dharmasthala, says will talk to disappointed MLAs who are resigning.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm