ಬ್ರೇಕಿಂಗ್ ನ್ಯೂಸ್
12-04-23 08:22 pm Mangalore Correspondent ಕರಾವಳಿ
ಬೆಳ್ತಂಗಡಿ, ಎ.12 : ಟಿಕೆಟ್ ವಂಚಿತರೆಲ್ಲರ ಜೊತೆ ಮಾತನಾಡಿದ್ದೇನೆ. ಅವರನ್ನು ಶಾಸಕರಾಗಿ ಮಾಡಿರೋದು ಕೂಡ ಪಕ್ಷವೇ. ಪಕ್ಷ ಅವರನ್ನು ಗೌರವಪೂರ್ವಕ ನಡೆಸಿಕೊಂಡಿದೆ. ನಡೆಸಿಕೊಳ್ಳುತ್ತದೆ. ಅಸಮಾಧಾನ ಇದ್ದವರ ಜೊತೆಗೆ ಮಾತನಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿಯಿತ್ತು ದೇವರ ದರ್ಶನ ಪಡೆದ ಸಿಎಂ ಬೊಮ್ಮಾಯಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ, ಕಟೀಲು, ಸೋಮೇಶ್ವರ ದೇವಸ್ಥಾನ ಭೇಟಿ ನೀಡಲಿದ್ದೇನೆ. ಪ್ರತಿ ಚುನಾವಣೆಗೆ ಮುಂಚೆ ಭೇಟಿ ಕೊಡುತ್ತಿದ್ದೆ. ಈ ಬಾರಿಯೂ ಭೇಟಿ ನೀಡಿದ್ದೇನೆ. ಕನ್ನಡ ನಾಡಿನ ಸುಭಿಕ್ಷೆಗಾಗಿ, ಸತ್ಯಕ್ಕೆ ಜಯ ಸಿಗುವಂತೆ ಪ್ರಾರ್ಥನೆ ಮಾಡಿದ್ದೇನೆ ಎಂದರು.
ಟಿಕೆಟ್ ವಂಚಿತರು ರಾಜಕೀಯ ಭವಿಷ್ಯ ಮಸುಕಾಯ್ತು ಅಂತ ಅನ್ಕೊಳ್ಳುವುದು ಬೇಡ. ಅವರ ಭವಿಷ್ಯವೂ ಸುರಕ್ಷಿತವಾಗಿ ಇರಲಿದೆ. ಟಿಕೆಟ್ ಸಿಗದಾಗ ಸಹಜವಾಗಿ ಅಸಮಾಧಾನ ಆಗುತ್ತದೆ ಎಂದು ಆ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಸವದಿಯವರ ರಾಜಿನಾಮೆ ಪ್ರಸ್ತಾಪ ವಿಚಾರ ಕೇಳಿದ್ದಕ್ಕೆ, ಬೇಸರದಿಂದ ಆ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಸವದಿ ಅವರಿಗೆ ಪಕ್ಷದ ಜೊತೆ ಸಂಬಂಧ ಇದೆ. ನನ್ನ ಜೊತೆಗೂ ಬಹಳ ಹತ್ತಿರದ ಸಂಬಂಧ ಇದೆ. ಅವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ. ನಾಳೆ, ನಾಡಿದ್ದರಲ್ಲಿ ಬಿಜೆಪಿ ಎರಡನೇ ಪಟ್ಟಿಯೂ ಬಿಡುಗಡೆಯಾಗಲಿದೆ ಎಂದರು.
ವಿನಯ ಕುಲಕರ್ಣಿ ನಿಮ್ಮ ಎದುರಾಳಿಯಾಗಿ ಸ್ಪರ್ಧಿಸುತ್ತಾರೆಂಬ ಪ್ರಶ್ನೆಗೆ, ಬಿಜೆಪಿ ಯಾರನ್ನೂ ಟಾರ್ಗೆಟ್ ಮಾಡಿಲ್ಲ. ನನ್ನ ಎದುರಾಳಿ ಯಾರೆಂಬುವುದು ನನಗೆ ಮುಖ್ಯ ಅಲ್ಲ. ನನಗೆ ನನ್ನ ಕ್ಷೇತ್ರದ ಜನ ಮುಖ್ಯ. ಯಾರೇ ಆದರೂ ಎದುರಿಸುತ್ತೇನೆ. ಜನರು ನನಗೆ ಮತ ನೀಡಲಿದ್ದಾರೆ ಎಂದರು.
ಹಲವು ಟಿಕೆಟ್ ವಂಚಿತರು ರಾಜಕೀಯ ನಿವೃತ್ತಿ ಹೇಳಿಕೆ ನೀಡಿರುವ ಕುರಿತ ಪ್ರಶ್ನೆಗೆ, ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗೋದಾಗಿ ಹೇಳಿದ್ದಾರೆ. ಪೂರ್ತಿ ರಾಜಕೀಯದಿಂದ ನಿವೃತ್ತಿಯಾಗೋದಾಗಿ ಹೇಳಿಲ್ಲ. ಈಶ್ವರಪ್ಪ ಜೊತೆ ವರಿಷ್ಠರು ಮಾತನಾಡುತ್ತಾರೆ. ಇನ್ನು ಸುಳ್ಯದ ಅಂಗಾರ ಜಂಟಲ್ಮ್ಯಾನ್. ಅವರ ಜೊತೆಗೂ ಮಾತನಾಡುತ್ತೇನೆ ಎಂದು ಹೇಳಿದರು.
#Mangalore #CMBommai visits #Dharmasthala temple, says will talk to disappointed #MLAs who are resigning pic.twitter.com/HCMMJvfU9u
— Headline Karnataka (@hknewsonline) April 12, 2023
Mangalore CM Basavaraj Bommai visits Dharmasthala, says will talk to disappointed MLAs who are resigning.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm