ಬ್ರೇಕಿಂಗ್ ನ್ಯೂಸ್
12-04-23 09:11 pm Mangalore Correspondent ಕರಾವಳಿ
ಪುತ್ತೂರು, ಎ.12: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಊರಲ್ಲೇ ಬಿಜೆಪಿ ಕಾರ್ಯಕರ್ತರ ಆಕ್ರೋಶ ಕಟ್ಟೆಯೊಡೆದಿದೆ. ಟಿಕೆಟ್ ಘೋಷಣೆಯಲ್ಲಿ ತಾರತಮ್ಯ ಮಾಡಿದ್ದಾರೆ, ಪುತ್ತೂರಿನಲ್ಲಿ ಹಿಂದು ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಟಿಕೆಟ್ ನೀಡದೇ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸಾವಿರಾರು ಕಾರ್ಯಕರ್ತರು ಸೇರಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಪುತ್ತೂರಿನಲ್ಲಿ ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಬೇಕೆಂದು ಕಳೆದ ಎರಡು ತಿಂಗಳಿನಿಂದ ಭಾರೀ ಅಭಿಯಾನ ನಡೆದಿತ್ತು. ಈ ನಡುವೆ, ಶಾಸಕ ಸಂಜೀವ ಮಠಂದೂರು ಮಳೆಗಾಲದಲ್ಲಿ ಅಣಬೆಗಳು ಬಂದಂತೆ ಎಂದು ಪರೋಕ್ಷವಾಗಿ ಅರುಣ್ ಪುತ್ತಿಲರನ್ನು ಟೀಕಿಸಿದ್ದು ಕಾರ್ಯಕರ್ತರ ಸಿಟ್ಟಿಗೆ ಕಾರಣವಾಗಿತ್ತು. ಶಾಸಕರನ್ನು ಬಳಿಕ ರಸ್ತೆಯಲ್ಲಿ ಅಡ್ಡ ಹಾಕಿ ಕಾರ್ಯಕರ್ತರೇ ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಅರುಣ್ ಪುತ್ತಿಲ ಹೆಸರನ್ನು ಪರಿಗಣಿಸದೆ ರೇಸಲ್ಲೇ ಇಲ್ಲದ ಆಶಾ ತಿಮ್ಮಪ್ಪ ಗೌಡರಿಗೆ ಪುತ್ತೂರು ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಭೆ ಸೇರಿ ಆಕ್ರೋಶ ಹೊರಹಾಕಿದ್ದಾರೆ.

ಪುತ್ತೂರಿನ ಸಾಲ್ಮರದಲ್ಲಿ ಖಾಸಗಿ ಸಭಾಂಗಣದಲ್ಲಿ ಸಾವಿರಾರು ಕಾರ್ಯಕರ್ತರು ಸಭೆ ಸೇರಿದ್ದು ಅರುಣ್ ಪುತ್ತಿಲ ಪರವಾಗಿ ಘೋಷಣೆ ಕೂಗಿದ್ದಾರೆ. ಅಲ್ಲದೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಭಿಮಾನಿಗಳು ಒತ್ತಾಯ ಮಾಡಿದ್ದಾರೆ. ಸಭೆಯಲ್ಲಿ ಮಾತನಾಡಿದ ಅರುಣ್ ಪುತ್ತಿಲ, ಈ ಬಗ್ಗೆ ಹಿರಿಯರೊಂದಿಗೆ ಚರ್ಚಿಸಿ ನನ್ನ ನಿಲುವು ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸೇರಿದಂತೆ ಪಕ್ಷದ ನಾಯಕರ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ಸಂಜೀವ ಮಠಂದೂರು ಖಾಸಗಿ ಫೋಟೊ ಲೀಕ್ ಆದಬಳಿಕ ಅವರು ಸ್ಥಾನ ಕಳಕೊಳ್ಳುವುದು ಖಾತ್ರಿಯಾಗಿತ್ತು. ನಳಿನ್ ಆಪ್ತ ಹರೀಶ್ ಕಂಜಿಪಿಲಿ, ಹಿಂದು ಮುಖಂಡ ಅರುಣ್ ಪುತ್ತಿಲ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಆದರೆ ಸುಳ್ಯ ಮೂಲದ ಗೌಡ ಸಮುದಾಯದ ಆಶಾ ತಿಮ್ಮಪ್ಪ ಗೌಡರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದೆ. ಇದರಿಂದ ಅರುಣ್ ಪುತ್ತಿಲ ಬೆಂಬಲುಗರು ಸಿಟ್ಟುಗೊಂಡಿದ್ದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೇ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಆಶಾ ತಿಮ್ಮಪ್ಪ ಈ ಹಿಂದೆ ಜಿಪಂ ಅಧ್ಯಕ್ಷೆ ಆಗಿದ್ದರೂ, ಪುತ್ತೂರಿನಲ್ಲಿ ಕಾರ್ಯಕರ್ತರ ಸಂಪರ್ಕ ಹೊಂದಿಲ್ಲ. ಜೊತೆಗೆ, ಪಕ್ಷ ಮತ್ತು ಸಂಘ ಪರಿವಾರದಲ್ಲಿ ಸಕ್ರಿಯವಾಗಿಲ್ಲ. ಈ ಕಾರಣಕ್ಕೆ ಪುತ್ತೂರಿನ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡಿದ್ದಾರೆ. ಪಕ್ಷದ ಅಭ್ಯರ್ಥಿ ವಿರುದ್ಧವೇ ಬಂಡಾಯ ಸ್ಪರ್ಧೆಗಿಳಿಸಲು ಮುಂದಾಗಿದ್ದಾರೆ.
Puttur Arun Kumar Puthila followers gather in thousands after he loses BJP ticket. His followers gathered in large number demanding High command to give him ticket for puttur constituency.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am