ಬ್ರೇಕಿಂಗ್ ನ್ಯೂಸ್
13-04-23 01:16 pm Mangalore Correspondent ಕರಾವಳಿ
ಮಂಗಳೂರು, ಎ.13 : ಕಾಂಗ್ರೆಸ್ ನವರಿಗೆ 60-65 ಕ್ಷೇತ್ರಗಳಿಗೆ ಅಭ್ಯರ್ಥಿ ಇಲ್ಲ, ಅದಕ್ಕೆ 160 ಕ್ಷೇತ್ರಕ್ಕೆ ಅಭ್ಯರ್ಥಿ ಮಾಡಿ ನಿಲ್ಲಿಸಿದ್ದಾರೆ. ಅವರದ್ದು ಆರಂಭ ಶೂರತ್ವ ಅಷ್ಟೇ, ಈಗ ಬೇರೆ ಕಡೆಯಿಂದ ಆಮದು ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ಇದ್ದಾರೆ. ಕಾಂಗ್ರೆಸ್ ಬಳಿ ಸಮರ್ಥ ಅಭ್ಯರ್ಥಿ ಇಲ್ಲ, ಅವರು ಅಧಿಕಾರಕ್ಕೆ ಬರೋದೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಆಗಿದೆ, ಇನ್ನು 12 ಕಡೆಯಷ್ಟೇ ಉಳಿದಿದೆ. ಅದು ಶೀಘ್ರದಲ್ಲೇ ಆಗತ್ತೆ. ಕೆಲವು ಕಡೆ ಅಪೇಕ್ಷಿತರು, ಆಕಾಂಕ್ಷಿಗಳು, ಎಂಎಲ್ ಸಿಗಳು ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಇನ್ನೊಂದು ವಾರದಲ್ಲಿ ಬಹುತೇಕ ಕಡೆ ಭಿನ್ನಮತ ಶಮನ ಆಗುತ್ತೆ, ಹಿರಿಯರು ಮಾತನಾಡ್ತಾ ಇದಾರೆ. ಹಿರಿಯರ ಜೊತೆಗೆ ನಾನು ಮತ್ತು ಹೈಕಮಾಂಡ್ ಕಡೆಯ ನಾಯಕರು ಕೂಡ ಮಾತನಾಡ್ತಿದಾರೆ, ಸಮಸ್ಯೆ ಬಗೆಹರಿಯೋ ವಿಶ್ವಾಸ ಇದೆ.
ಸವದಿ ರಾಜಿನಾಮೆ ಕುರಿತ ಪ್ರಶ್ನೆಗೆ, ಸವದಿ ಹಿರಿಯರಿದ್ದಾರೆ, ಅವರಿಗೆ ಭಾವನೆ ಇದೆ, ಸುಧೀರ್ಘ ರಾಜಕೀಯ ಜೀವನದಲ್ಲಿ ಇದ್ದಾರೆ. ಅವರ ಕ್ಷೇತ್ರದ ಜನರ ವಿಶ್ವಾಸ ಅವರು ಉಳಿಸಿಕೊಳ್ಳಬೇಕು. ಆ ಕಡೆಯಿಂದಲೂ ಅವರಿಗೆ ಒತ್ತಡ ಇದೆ, ಸಮಯ ಬೇಕು. ಆದಷ್ಟು ಬೇಗ ಅವರ ಸಮಸ್ಯೆ ಬಗೆ ಹರಿಯುವ ವಿಶ್ವಾಸ ಇದೆ.
ನೆಹರೂ ಒಲೇಕಾರ್ ಆರೋಪದ ಪ್ರಶ್ನೆಗೆ, ಅವರು ಯಾವ ಆರೋಪ ಬೇಕಾದ್ರೂ ಮಾಡಲಿ. 1500 ಕೋಟಿ ಅಲ್ಲ, ಯಾವುದೇ ಆರೋಪ ಇದ್ದರೂ ದಾಖಲೆ ಸಮೇತ ಮಾಡಲಿ. ನಾವು ಎದುರಿಸುತ್ತೇವೆ. ಹೇಳಿಕೆಗಳಿಂದ ಹಗರಣ ಆಗಲ್ಲ, ದಾಖಲೆ ಸಹಿತ ಮಾಡಲಿ, ಸತ್ಯಾಸತ್ಯತೆ ಹೊರಬರಲಿ ಎಂದರು.
ಟಿಕೆಟ್ ಸಿಗದವರು ಪಕ್ಷ ಬಿಟ್ಟು ಹೋಗುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ರಾಜಕಾರಣದಲ್ಲಿ ಪಕ್ಷ ಬದಲಿಸೋದು ಸಾಮಾನ್ಯ, ಅದು ಆಗ್ತಾ ಇರುತ್ತೆ. ಪಕ್ಷದೊಳಗಿನ ಬಂಡಾಯ ಸರಿಪಡಿಸ್ತಾ ಇದೀವಿ, ಕಾರ್ಯಕರ್ತರು ಮತ್ತು ಪಕ್ಷ ಗಟ್ಟಿ ಇರೋದ್ರಿಂದ ಈ ರೀತಿಯ ಬೆಳವಣಿಗೆಯಿಂದ ಡ್ಯಾಮೇಜ್ ಆಗಲ್ಲ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.
Congress doesn't have efficient leaders, so trying to catch up BJP MLAS slams Bommai in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm